Priyank Kharge: ಬಿಜೆಪಿ ನಾಯಕರು ಅಯೋಗ್ಯರು; ಹೀಗೆ ಹೇಳಿದ್ದು ಯಾರು ಗೊತ್ತಾ?

Priyank Kharge:ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂದರ್ಭ ಪ್ರಿಯಾಂಕ್‌ ಖರ್ಗೆ, ರಾಜ್ಯ ಬಿಜೆಪಿಯವರ ಮೇಲೆ ಹರಿಹಾಯ್ದಿದ್ದಾರೆ. ಮೊದಲು ನರೇಂದ್ರ ಮೋದಿ ಅವರು ಯಾಕೆ ಬರ್ತಾರೆ ಎಂಬುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

 

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕಕ್ಕೆ ಏಕೆ ಬರ್ತಾರೆ ಎನ್ನುವುದೇ ಅವರ ಪಕ್ಷದ ಅಯೋಗ್ಯರಿಗೆ ಗೊತ್ತಿಲ್ಲ ಎಂದು ರಾಜ್ಯ ಬಿಜೆಪಿ (BJP Karnataka) ನಾಯಕರ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಬಿಜೆಪಿ ನಾಯಕರನ್ನು ಅಯೋಗ್ಯರಿಗೆ ಹೋಲಿಕೆ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯ 25 ಸಂಸದರಿದ್ದಾರೆ. ಅಷ್ಟು ಜನಯಿದ್ದರೂ ಏನು ಯೋಜನೆ ತಂದಿದ್ದಾರೆ. ಹೀಗಾಗಿ ಬಿಜೆಪಿಯವರು ಅಯೋಗ್ಯರು ಎಂದು ಹೇಳಿದ್ದಾರೆ.

 

Leave A Reply

Your email address will not be published.