BJP Karnataka: ಲೋಕಸಭಾ ಚುನಾವಣೆಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್; ಮಾಜಿ ಸಿಎಂ ಗೆ ಗಾಳ: ಪಕ್ಷದ ದೊಡ್ದ ಹಿಂಟ್ ಕೊಟ್ಟ ಸುನೀಲ್ ಕುಮಾರ್!!

BJP Karnataka: ಮುಂದಿನ ಲೋಕಸಭಾ ಚುನಾವಣೆಯನ್ನು (Lok Sabha Election 2024) ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿಯಲ್ಲಿ (BJP Karnataka) ಅನೇಕ ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ.

ಲೋಕಸಭಾ ಚುನಾವಣೆಯನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ. ಈ ಕುರಿತು ಬಿಜೆಪಿ ಕಾರ್ಯತಂತ್ರದ ಬಗ್ಗೆ ಸುನೀಲ್ ಕುಮಾರ್ ಅವರು ಮಾಧ್ಯಮದ ಜೊತೆಗೆ ಮಾತನಾಡಿದ್ದಾರೆ.ಪಕ್ಷ ತೊರೆದ ನಾಯಕರನ್ನು ವಾಪಸ್ ಕರೆತರುವ ಪ್ರಯತ್ನ ನಡೆಯುತ್ತಿದೆ. ಇನ್ನು ಜಗದೀಶ್ ಶೆಟ್ಟರ್ ಅವರ ಜತೆ ಬಿಜೆಪಿ ಹೈಕಮಾಂಡ್ ಮಾತನಾಡಲಿದೆ ಎಂದು ಹೇಳಿದ್ದಾರೆ.

ಪಕ್ಷದಿಂದ ದೂರವಾಗಿದ್ದವರನ್ನು ಮರಳಿ ಪಕ್ಷಕ್ಕೆ ಹಿಂತಿರುಗಿಸುವ ಪ್ರಯತ್ನ ಮಾಡುತ್ತೇವೆ. ಎಲ್ಲರನ್ನೂ ಕರೆ ತಂದು ಒಟ್ಟಾಗಿಸುವ ಕೆಲಸ ಮಾಡಲಾಗುತ್ತದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shetter) ಅವರ ಜತೆ ಹೈಕಮಾಂಡ್ (BJP High Command) ನಾಯಕರು ಮಾತನಾಡುತ್ತಾರೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ (V Sunil Kumar) ಹೇಳಿದ್ದಾರೆ.

Leave A Reply

Your email address will not be published.