Mangaluru News: ಕರಾವಳಿಯಲ್ಲಿ ತುಳುವರಿಂದ ಹೊಸ ಅಭಿಯಾನ!!! ಬೇಡಿಕೆ ಏನು?
![Mangaluru News](https://hosakannada.com/wp-content/uploads/2024/01/IMG-20240126-WA0028.jpg)
Mangaluru Tulu Language: ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಕರಾವಳಿಗರು ಮುಂದಾಗಿದ್ದಾರೆ. ಜ.29 ರಿಂದ ಫೆ.2 ರವರೆಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ (8th Schedule) ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡ ಬೇಕೆನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆ.
![](https://hosakannada.com/wp-content/uploads/2024/07/First.jpeg)
![](https://hosakannada.com/wp-content/uploads/2024/07/Middle.jpeg)
ಹಾಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 10 ಸಾವಿರ ಪತ್ರಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈಗಾಗಲೇ ಇದಕ್ಕೆ ಜನ ಬೆಂಬಲ ದೊರಕಿದೆ. ತುಳು ಭಾಷೆ ಅಧಿಕೃತ ಲಿಪಿಯನ್ನು ಹೊಂದಿದೆ. ಹಾಗಾಗಿ ಸಂವಿಧಾನದಲ್ಲಿ ಈ ಭಾಷೆಗೆ 8ನೇ ಪರಿಚ್ಛೇದದಲ್ಲಿ ಸ್ಥಾನಮಾನ ಸಿಕ್ಕಲ್ಲಿ ಸಾಂವಿಧಾನಿಕ ಮಾನ್ಯತೆ ಸಿಗಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.