Belthangady News: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಮೂವರು ಸ್ಥಳದಲ್ಲೇ ಸಾವು!!!
![](https://hosakannada.com/wp-content/uploads/2024/01/IMG_20240128_190132.jpg)
Mangaluru: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಡುಮದ್ದು ಘಟಕದಲ್ಲಿ ಭಾನುವಾರ ನಡೆದ ಸ್ಫೋಟದಲ್ಲಿ ಮೂವರು ಛಿದ್ರ ಛಿದ್ರಗೊಂಡಿದ್ದಾರೆ.
![](https://hosakannada.com/wp-content/uploads/2024/07/First.jpeg)
ಈ ತೀವ್ರವಾದ ಸ್ಫೋಟದಲ್ಲಿ ತ್ರಿಶೂರಿನ ವರ್ಗೀಸ್, ಹಾಸನದ ಚೇತನ್, ಕೇರಳದ ಸ್ವಾಮಿ ಮೃತ ಹೊಂದಿದ್ದಾರೆ. ಕುಚ್ಚೋಡಿ ಸಮೀಪದ ನಿವಾಸಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ದಿನೇಶ್ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ ಕೇರಳ, ಕೇಶವ ಕೇರಳ ಇಲ್ಲಿ ಕೆಲಸ ಮಾಡುತ್ತಿದ್ದರು.
![](https://hosakannada.com/wp-content/uploads/2024/07/Middle.jpeg)
ಶೆಡ್ ಸಂಪೂರ್ಣ ಧ್ವಂಸ ಗೊಂಡಿದ್ದು, ಇದರ ಸದ್ದು ನಾಲ್ಕು ಕಿ.ಮೀ ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.