Agriculture Budget 2024: ಬಜೆಟ್‌ನಲ್ಲಿ ಕೃಷಿ ಕ್ಷೇತ್ರದ ಮೇಲೆ ಕೇಂದ್ರೀಕರಣ;

Agriculture Budget 2024: ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ಇಂದು ಹಲವು ಘೋಷಣೆಗಳನ್ನು ಎಲ್ಲರನ್ನೂ ಮನದಲ್ಲಿಟ್ಟು ಘೋಷಣೆ ಮಾಡುವ ಕಾಳಜಿ ವಹಿಸಲಾಗಿದೆ.

ಹಾಗಾಗಿ ಇದೀಗ ಕೃಷಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಹೈನುಗಾರರಿಗೆ ಸಮಗ್ರ ಕಾರ್ಯಕ್ರಮ ರೂಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: Budget 2024: ತೆರಿಗೆ ಸ್ಲ್ಯಾಬ್ ಮತ್ತು ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ!

ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 11.8 ಕೋಟಿ ರೈತರಿಗೆ ಸರ್ಕಾರದ ನೆರವು ನೀಡಲಾಗಿದೆ ಎಂದು ಹೇಳಿದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ಕೋಟ್ಯಂತರ ರೈತರಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ದೇಶದಾದ್ಯಂತ ಆಹಾರ ಪೂರೈಕೆದಾರರು ಪಿಎಂ ಕಿಸಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಅಲ್ಲದೆ, ಪ್ರಧಾನ ಮಂತ್ರಿ ಫಸಲ್ ಯೋಜನೆಯ ಲಾಭವನ್ನು ನಾಲ್ಕು ಕೋಟಿ ರೈತರಿಗೆ ನೀಡಲಾಗುತ್ತಿದೆ.

Leave A Reply

Your email address will not be published.