15 PFI ಸದಸ್ಯರಿಗೆ ಮರಣದಂಡನೆ ವಿಧಿಸಿದ ಜಡ್ಜ್ಗೆ ಕೊಲೆ ಬೆದರಿಕೆ!!
![PFI](https://hosakannada.com/wp-content/uploads/2024/02/IMG-20240202-WA0009.jpg)
PFI ಇಸ್ಲಾಂ ಮೂಲಭೂತವಾದಿ ಸಂಘಟನೆಯನ್ನು UAPA ಕಾಯ್ದೆ ಅಡಿ ಕೇಂದ್ರ ಸರಕಾರ ನಿಷೇಧಿಸಿದೆ. ಇದೀಗ ಕೇರಳದ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಕುಟುಂಬ ಸದಸ್ಯರ ಮುಂದೆ ಹತ್ಯೆಗೈದ ಪಿಎಫ್ಐ ಸದಸ್ಯರಿಗೆ ಮರಣದಂಡನೆಯನ್ನು ವಿಧಿಸಲಾಗಿದೆ. ಈ ತೀರ್ಪು ನೀಡಿದ ಆಲಫುಝಾ ಜಿಲ್ಲಾ ನ್ಯಾಯಾಲಯ ನ್ಯಾಯಮೂರ್ತಿ ಶ್ರೀದೇವಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿರುವ ಕುರಿತು ವರದಿಯಾಗಿದೆ.
![](https://hosakannada.com/wp-content/uploads/2024/07/First.jpeg)
ಸಾಮಾಜಿಕ ಮಾಧ್ಯಮಗಳ ಮೂಲಕ ಜಡ್ಜ್ಗೆ ಕೊಲೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಬೆದರಿಕೆ ಬಂದ ಬೆನ್ನಲೇ ಇದೀಗ ಕೇರಳ ಪೊಲೀಸರು ಜಡ್ಜ್ ಶ್ರೀದೇವಿ ಅವರ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮನೆ ಹಾಗೂ ಕೋರ್ಟ್ ಆವರಣದಲ್ಲೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
![](https://hosakannada.com/wp-content/uploads/2024/07/Middle.jpeg)
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಮತ್ತು ಎಸ್ಡಿಪಿಐ ಸಂಘಟನೆಗಳ 15 ಸದಸ್ಯರು ಡಿ.19, 2021ರಂದು ರಂಜಿತ್ ಶ್ರೀನಿವಾಸನ್ ಅವರ ಮನೆಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಅವರ ಕುಟುಂಬದ ಎದುರಿನಲ್ಲೇ ಬರ್ಬರವಾಗಿ ಹತ್ಯೆಗೈದಿದ್ದರು. ಈ ಕುರಿತು 15 ಮಂದಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ತೀರ್ಪು ಪ್ರಕಟಿಸಿದ್ದಾರೆ ನ್ಯಾ. ಶ್ರೀದೇವಿ.