Mangaluru Politics: ಪ್ರತಿಭಾ ಕುಳಾಯಿ ಬಿಜೆಪಿಗೆ?
![Mangaluru Politics](https://hosakannada.com/wp-content/uploads/2024/02/IMG-20240204-WA0012.jpg)
Mangaluru: ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಕೈ ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಾ ಕುಳಾಯಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಾತಿ ಆಧಾರ ಮತ್ತು ಮಹಿಳಾ ಅಭ್ಯರ್ಥಿಯಾಗಿ ಮಂಗಳೂರು ಉತ್ತರದಿಂದ ಪ್ರತಿಭಾ ಟಿಕೆಟ್ ಪಡೆಯಲು ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ. ಆದರೆ ಮಂಗಳೂರು ಉತ್ತರ ಇನಾಯತ್ ಅಲಿ ಅವರ ಪಾಲಾಯ್ತು.
![](https://hosakannada.com/wp-content/uploads/2024/07/First.jpeg)
ಪ್ರತಿಭಾ ಕುಳಾಯಿ ಅವರ ಜೊತೆ ಸ್ಥಳೀಯ ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಎರಡು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಪ್ರತಿಭಾ ಅವರು ತಮ್ಮ ಮುಂದಿನ ನಡೆ ನಿರ್ಧರಿಸಲಿದ್ದಾರೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.
![](https://hosakannada.com/wp-content/uploads/2024/07/Middle.jpeg)
ಆದರೆ ಈ ಕುರಿತು ಪ್ರತಿಭಾ ಕುಳಾಯಿ ಅವರಿಂದ ಯಾವುದೇ ಅಧಿಕೃತ ಮಾಹಿತಿ ದೊರಕಿಲ್ಲ.
1 Comment
Nia Mcdowell