Parliment election : ‘ಕಮಲ’ ಪಡೆಗೆ ಬಿಗ್ ಶಾಕ್ !! ಲೋಕಸಭಾ ಚುನಾವಣೆಯಲ್ಲಿ ‘ಕಾಂಗ್ರೆಸ್’ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ‘ಬಿಜೆಪಿ’ಯ ಈ ಪ್ರಬಲ ನಾಯಕ
![Parliament Election](https://hosakannada.com/wp-content/uploads/2024/02/IMG-20240206-WA0032.jpg)
Parliment election : ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವಿದ್ದ ಸಂದರ್ಭದಲ್ಲಿ 17 ಜನರೊಂದಿಗೆ ಪಕ್ಷಾಂತರ ಮಾಡಿ ಬಿಜೆಪಿ ಸೇರಿ ಸರ್ಕಾರವನ್ನು ಉರುಳಿಸಿದ್ದ ಎಚ್ ವಿಶ್ವನಾಥ್ ಅವರು ಇದೀಗ ಮರಳಿ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ ಕಾಂಗ್ರೆಸ್ ನಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ(Parliament election)ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ.
![](https://hosakannada.com/wp-content/uploads/2024/07/First.jpeg)
![](https://hosakannada.com/wp-content/uploads/2024/07/Middle.jpeg)
ಇದನ್ನೂ ಓದಿ: Ankola: ಬಾಗಿಲು ತೆಗೆದು ಬೆತ್ತಲೆ ಸ್ನಾನ ಮಾಡಿದ ವ್ಯಕ್ತಿ – ಬಾಗಿಲು ಹಾಕೋ ಎಂದ ತಮ್ಮನ ಹೆಂಡತಿ!! ಮುಂದೆ ನಡೆದದ್ದೇ ಬೇರೆ
ಹೌದು, ಕಾಂಗ್ರೆಸ್(Congress)ನಿಂದ ಪಕ್ಷಾಂತರ ಮಾಡಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಹೆಚ್. ವಿಶ್ವನಾಥ್(H Vishwanath) ಅವರು ಈಗ ಮೈಸೂರು-ಕೊಡಗು (Mysore-kodagu) ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹನ(Prathap simha) ವಿರುದ್ಧ ಸ್ಪರ್ಧಿಸಲು ಮುಂದಾಗಿದ್ದು ಈ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.
ಅಂದಹಾಗೆ ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾನು ಒಟ್ಟಿಗೆ ಸಚಿವರಾಗಿ ಕೆಲಸ ಮಾಡಿದವರು. ಖರ್ಗೆ ಸಾಹೇಬ್ರು ನಮ್ಮನ್ನೆಲ್ಲ ಪ್ರೋತ್ಸಾಹಿಸಿ ಬೆಳೆಸಿದವರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ನಾನು ಯೂತ್ ಕಾಂಗ್ರೆಸ್ನಿಂದಲೂ ಒಟ್ಟಿಗೆ ಕೆಲಸ ಮಾಡಿದವರು. ಹೀಗಾಗಿ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನನಗೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.