Lakshmana savadi: ಬಿಜೆಪಿ ಸೇರ್ಪಡೆ ವಿಚಾರ- ಬಿಗ್ ಅಪ್ಡೇಟ್ ಕೊಟ್ಟ ಲಕ್ಷ್ಮಣ ಸವದಿ !!

 

Lakshmana savadi: ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ(Lakshmana savadi)ಯವರು ಮರಳಿ ಬಿಜೆಪಿ ಸೇರುತ್ತಾರೆ, ಲೋಕಸಭಾ ಟಿಕೆಟ್ ಪಡೆದು ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ಸೇರ್ಪಡೆ ಕುರಿತು ಸವದಿಯವರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ, ಅದು ಮುಗಿದ ಅಧ್ಯಾಯ ಎಂದಿದ್ದಾರೆ.

ಹೌದು, ನವದೆಹಲಿ(New Delhi)ಯಲ್ಲೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ ಬಿಜೆಪಿ ನನ್ನ ಪಾಲಿಗೆ ಮುಗಿದ ಅಧ್ಯಾಯವಾಗಿದೆ. ಈಗ ಅವರಿಗೆ ನಾನು ಬೇಕಾಗಿರಬಹುದು. ಆದರೆ ನಾನು ಹೋಗುವುದಿಲ್ಲ. ಅವರು ನನ್ನನ್ನು ನಡೆಸಿಕೊಂಡ ರೀತಿಗೆ ನಾನು ಬಿಜೆಪಿಗೆ ಹಿಂದಿರುಗಿ ಹೋಗಲ್ಲ ಬಿಜೆಪಿ ಗಾಳಕ್ಕೆ ಬೀಳುವ ಆಸಾಮಿ ನಾನಲ್ಲ. ಕಾಂಗ್ರೆಸ್ ನನ್ನನ್ನು ಗೌರವದಿಂದ ಬರ ಮಾಡಿಕೊಂಡಿದೆ. ನನಗೆ ಆಶ್ರಯ ನೀಡಿದೆ . ನಾನು ಬಿಜೆಪಿ(BJP)ಗೆ ಹೋಗೋನಿದ್ದರೆ ಯಾಕೆ ಈ ಪ್ರತಿಭಟನೆಗೆ ಬರಬೇಕಿತ್ತು. ಬಿಜೆಪಿ ಮುಗಿದ ಅಧ್ಯಾಯ. ಅದರ ಬಗ್ಗೆ ಇನ್ನು ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಅಂದಹಾಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ(Lakshmana savadi) ಬಿಜೆಪಿ ತೊರೆದು ಕಾಂಗ್ರೆಸ್ ತೊರೆದಿದ್ದರು. ಆದರೆ ಅಚ್ಚರಿ ಎಂಬಂತೆ ಕೆಲವು ದಿನಗಳ ಹಿಂದಷ್ಟೇ ಜಗದೀಶ್ ಶೆಟ್ಟರ್(Jagadish shetter) ಮರಳಿ ಬಿಜೆಪಿ ಸೇರಿ ಮತ್ತೆ ತಮ್ಮ ಮನೆ ಸೇರಿಕೊಂಡರು. ಈ ಬೆನ್ನಲ್ಲೇ ಸವದಿ ಕೂಡ ಮರಳುತ್ತಾರೆ ಎಂಬ ಚರ್ಚೆ ಜೋರಾಗಿದ. ಆದರೆ ಸವದಿ ಈ ವಿಚಾರವನ್ನು ತಳ್ಳಿಹಾಕಿದ್ದಾರೆ. ಜಗದೀಶ್ ಶೆಟ್ಟರ್ ಕೂಡ ಹೀಗೆ ಹೇಳುತ್ತಲೇ ಸಡನ್ ಆಗಿ ಘರ್ ವಾಪ್ಸಿ ಆದರು. ಸವದಿಯವರೂ ಹೀಗೆ ಆದರೂ ಅಚ್ಚರಿ ಏನಿಲ್ಲ. ರಾಜಕೀಯ ಆಟ ಬಲ್ಲವರಾರು ಅಲ್ಲವೇ?

Leave A Reply

Your email address will not be published.