Udupi Nejaru: ಉಡುಪಿ ನಾಲ್ವರ ಹತ್ಯೆ ಪ್ರಕರಣ; ಮೃತ ಸಹೋದರ ಅಂತ್ಯಕ್ರಿಯೆ ವಿಧಿಗಳಲ್ಲಿ ಭಾಗಿಯಾಗಲು ಪೆರೋಲ್ಗೆ ಅರ್ಜಿ ಹಾಕಿದ ಆರೋಪಿ, ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
![Udupi Nejaru Case](https://hosakannada.com/wp-content/uploads/2023/11/WhatsApp-Image-2023-11-20-at-09.45.07-1.jpeg)
Udupi: ಉಡುಪಿಯ ನೇಜಾರು ಗ್ರಾಮದಲ್ಲಿ ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ನಿರ್ದಯವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಪೆರೋಲ್ ಅರ್ಜಿಯನ್ನು ನ್ಯಾಯಾಲಯವು ತಿರಸ್ಕಾರ ಮಾಡಿದೆ.
![](https://hosakannada.com/wp-content/uploads/2024/07/First.jpeg)
ಫೆ.1 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಿಧನರಾದ ತಮ್ಮ ಮೃತ ಸಹೋದರ ನಿತಿನ್ ಅವರ ಅಂತ್ಯಕ್ರಿಯೆ ವಿಧಿಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಬಿಡುಗಡೆಗಾಗಿ ಫೆ.8 ರಂದು ಮೂರು ಗಂಟೆಗಳ ಅವಧಿಗೆ ಚೌಗುಲೆ ಪೆರೋಲ್ಗೆ ಅರ್ಜಿ ಸಲ್ಲಿಸಿದ್ದನು.
![](https://hosakannada.com/wp-content/uploads/2024/07/Middle.jpeg)
ಆರೋಪಿಯನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ನ್ಯಾಯಾಲಯ ಪೆರೋಲ್ ನೀಡಲು ಆಕ್ಷೇಪಣೆ ಮಾಡಿದೆ. ಹೆಚ್ಚುವರಿಯಾಗಿ ಆರೋಪಿ ತನ್ನ ಸಹೋದರನ ಮರಣಪತ್ರವನ್ನು ಒದಗಿಸಲು ವಿಫರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.