Jiganehalli Mailaralingeshwara Karanika: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕುರಿತು ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ

Mailaralingeshwara Karanika: ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂಬ ಅರ್ಥದಲ್ಲಿ ಚಿಕ್ಕಮಗಳುರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಇದರ ಜೊತೆಗೆ ಮಳೆ ಬೆಳೆ ಚೆನ್ನಾಗಿ ಆಗಲಿದೆ ಎಂದು ಕೂಡಾ ಕಾರ್ಣಿಕ ನುಡಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: Mangaluru: ಚಾರಣಕ್ಕೆ ನಿಷೇಧವಿದ್ದರೂ ಶಿಫಾರಸ್ಸಿನ ಮೂಲಕ ಚಾರಣಕ್ಕೆ ತೆರಳಿದ್ದ ಡಿವೈಎಸ್‌ಪಿ ಸಂಬಂಧಿ ಪತ್ತೆ

“ಹುಟ್ಟಿದ ಕಮಲ ಆಕಾಶ ಮೆಟ್ಟಿತು. ಮಳೆ ಬೆಳೆ ಸಂಪಾಯಿತಲೇ ಪರಾಕ್‌” ಎಂದು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಈ ವರ್ಷ ಮಳೆ ಬೆಳೆ ಸಮೃದ್ಧವಾಗಲಿದೆ. ಮತ್ತೆ ಕಮಲ ಪಕ್ಷ ಅರಳುವುದು ನಿಶ್ಚಿತ ಎಂದು ಇದರ ಅರ್ಥ ಎಂದು ವ್ಯಾಖ್ಯಾನಿಸಲಾಗಿದೆ.

Leave A Reply

Your email address will not be published.