Rain Updates: ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ರಾಜ್ಯದ ಜನಕ್ಕೆ ತಂಪೆರೆವ ಸುದ್ದಿ ಕೊಟ್ಟ ಮಳೆರಾಯ

ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್‌ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ರಾಜ್ಯದಲ್ಲಿ ಈ ವರ್ಷದ ಮೊದಲ ಮಳೆಯಾಗಲಿದ್ದು ಬಿಸಿಲಿನ ಬೇಗೆಯಿಂದ ಮುಕ್ತಿ ನೀಡಲಿದೆ.

ಇದನ್ನೂ ಓದಿ: DK Shivakumar: ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ವಿಸ್ತರಿಸಿ : ಬ್ಯಾಂಕುಗಳಿಗೆ ಉಪ ಮುಖ್ಯಮಂತ್ರಿ ಡಿಕೆಶಿ ಮನವಿ

ಇನ್ನೂ , ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರಗಳಲ್ಲೂ ಮುಂಬರುವ ತಿಂಗಳ ಮೊದಲ ವಾರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

2 Comments
  1. […] ಇದನ್ನೂ ಓದಿ: Rain Updates: ಬಿಸಿಲಿನ ತಾಪದಿಂದ ತತ್ತರಿಸುತ್ತಿರು… […]

Leave A Reply

Your email address will not be published.