Deadly Accident: ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಸೇರಿ ಒಂದೇ ಕುಟುಂಬದ 5 ಮಂದಿಯ ದಾರುಣ ಸಾವು
![Deadly Accident](https://hosakannada.com/wp-content/uploads/2024/03/IMG-20240306-WA0039.jpg)
Deadly Accident: ಕಾರೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತರು ಸೇರಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದ ಘಟನೆಯೊಂದು ಆಂಧ್ರಪ್ರದೇಶದ ನಂದ್ಯಾಳದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಕುಟುಂಬವು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುವ ಸಮದಯಲ್ಲಿ ಈ ಆಕ್ಸಿಡೆಂಟ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ 5.15 ರ ಬೆಳಿಗ್ಗೆ ನಲ್ಲಗಟ್ಲ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
![](https://hosakannada.com/wp-content/uploads/2024/07/First.jpeg)
ಇದನ್ನೂ ಓದಿ: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಪೊಲೀಸ್ ವಶಕ್ಕೆ
![](https://hosakannada.com/wp-content/uploads/2024/07/Middle.jpeg)
ಟ್ರಕ್ನ ಚಾಲಕ ಗಾಡಿಯನ್ನು ಬದಿಗೆ ನಿಲ್ಲಿಸಿದ್ದು, ಕಾರು ಬಂದು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐದು ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಾರದ ಹಿಂದೆ ವಿವಾಹವಾಗಿದ್ದ ಬಾಲಕಿರಣ ಮತ್ತು ಕಾವ್ಯ ಸಾವಿಗೀಡಾಗಿದ್ದಾರೆ. ಬಾಲಕಿರಣ್ನ ತಾಯಿ ಮಂತ್ರಿ ಲಕ್ಷ್ಮಿ, ತಂದೆ ಮಂತ್ರಿ ರವೀಂದ್ರ್ , ಕಿರಿಯ ಸಹೋದರ ಉದಯ್ ಸಾವಿಗೀಡಾಗಿದ್ದಾರೆ. ಮುಂಜಾನೆ 5.15ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ ಅನ್ನು ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಗಮನಿಸದೇ ಇದ್ದುದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸಂತ್ರಸ್ತರೊಬ್ಬರ ಮೊಬೈಲ್ ಫೋನ್ನಿಂದ ಅವರ ಸಂಬಂಧಿಕರಿಗೆ ಕರೆ ಮಾಡಿ, ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ.