Tumkuru: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಪೊಲೀಸ್‌ ವಶಕ್ಕೆ

Mangaluru: ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಗೆ ಭಾಷಣ ಮಾಡಲೆಂದು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕ್‌ ಮುರಳೀಕೃಷ್ಭ ಹಸಂತಡ್ಕರನ್ನು ತುಮಕೂರು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದರೆನ್ನಲಾಗಿದೆ.

ಇದನ್ನೂ ಓದಿ: Bengaluru: ಮರಕ್ಕೆ ಆಸಿಡ್‌ ಸುರಿದ ಅಂಗಡಿಯವ; ಕಾರಣವೇನು?

ಕರ್ನಾಟಕದಲ್ಲಿ ನಡೆದ ಬಾಂಬ್‌ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್‌ ನಲ್ಲಿ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.

ಕಾಂಗ್ರೆಸ್‌ ಸರಕಾರದ ಈ ದೇಶದ್ರೋಹಿ ಕೆಲಸವನ್ನು ಬಜರಂಗದಳ ಖಂಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಯ ವಿರುದ್ಧ ಬಜರಂಗದಳ ನಿರಂತರವಾಗಿ ಹೋರಾಟ ಮಾಡುತ್ತಿದೆ. ನಮ್ಮನ್ನು ನೀವು ಬಂಧಿಸಿದರೂ ನಮ್ಮ ಹೋರಾಟ ನಿಲ್ಲದು ಎಂದು ಕಾಂಗ್ರೆಸ್‌ ಸರಕಾರಕ್ಕೆ ಬಜರಂಗದಳ ಮಂಗಳೂರು ಎಚ್ಚರಿಕೆ ನೀಡಿದೆ.

Leave A Reply

Your email address will not be published.