Parliment election: 18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ ಬಿಜೆಪಿ !! ಕಗ್ಗಂಟಾಗಿ ಉಳಿದ 8 ಕ್ಷೇತ್ರಗಳು
![Parliament Election](https://hosakannada.com/wp-content/uploads/2024/03/IMG-20240312-WA0005.jpg)
Parliment election ಗೆ ಕರ್ನಾಟಕದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ರಾಜ್ಯದ ವರಿಷ್ಠರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಈ ನಡುವೆ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ.
![](https://hosakannada.com/wp-content/uploads/2024/07/First.jpeg)
ಇದನ್ನೂ ಓದಿ: Pocso case: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ – ಬಾಲ ಮಂಜುನಾಥ ಸ್ವಾಮಿಯ ವಿಡಿಯೋ ವೈರಲ್ !!
![](https://hosakannada.com/wp-content/uploads/2024/07/Middle.jpeg)
ಹೌದು, ಇಂದು ದೆಹಲಿಯಲ್ಲಿ ನಡೆದ ಬಿಜೆಪಿ(BJP) ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳ 150 ಅಭ್ಯರ್ಥಿಗಳ ಎರಡನೇ ಪಟ್ಟಿ ಬಗ್ಗೆ ಚರ್ಚಿಸಲಾಗಿದೆ. ಹೈಕಮಾಂಡ್ ಜತೆ ರಾಜ್ಯ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಕರ್ನಾಟಕ(Karnataka) ದ 28 ಕ್ಷೇತ್ರಗಳ ಪೈಕಿ 18 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದ್ದು 10 ಕ್ಷೇತ್ರಗಳ ಟಿಕೆಟ್ ಗೊಂದಲವಾಗಿಯೇ ಉಳಿದಿದೆ ಎನ್ನಲಾಗಿದೆ.
ಈ ಹಾಲಿ ಸಂಸದರಿಗೆ ಟಿಕೆಟ್ ಅನುಮಾನ?
ರಾಜ್ಯದ 28 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳು ಬಿಜೆಪಿ ಕಗ್ಗಂಟಾಗಿವೆ. ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉತ್ತರ ಕನ್ನಡ ಅನಂತಕುಮಾರ್ ಹೆಗಡೆ, ಬೀದರ್ ಕ್ಷೇತ್ರದ ಭಗವಂತ್ ಖೂಬಾ, ದಾವಣಗೆರೆಯ ಸಿದ್ದೇಶ್ವರ್ಗೆ ಈ ಬಾರಿ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂದು ತಿಳಿದುಬಂದಿದೆ. ಇದರೊಂದಿಗೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಳಗಾವಿಯ ಟಿಕೆಟ್ ಕೂಡ ಕಗ್ಗಂಟಾಗಿದೆ.