Latest News: ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆಯ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಭಾರತ : ಸಾಮಾಜಿಕ ಮಾಧ್ಯಮ ಎಕ್ಸ್, ಯೂಟ್ಯೂಬ್‌ನಿಂದ ವಿಡಿಯೋ ಡಿಲೀಟ್

ಯೂಟ್ಯೂಬ್ ಮತ್ತು ಎಕ್ಸ್ ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕುರಿತ ಸಾಕ್ಷ್ಯಚಿತ್ರವನ್ನು ಭಾರತ ನಿರ್ಬಂಧಿಸಿದೆ.

ಇದನ್ನೂ ಓದಿ: Draupadi Murmu: ಒಂದು ರಾಷ್ಟ್ರ, ಒಂದು ಚುನಾವಣೆ : ರಾಮನಾಥ್ ಕೋವಿಂದ್ ಸಮಿತಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಕೆ

ಇದು ಕೆನಡಾ ಸರ್ಕಾರದ ಅನುದಾನಿತ ಪ್ರಸಾರವಾದ ಸಿಬಿಸಿಯಲ್ಲಿ ಕಾಣಿಸಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಕೆನಡಿಯನ್ ಬ್ರಾಡ್ಕಾಸ್ಟ್ ಕಂಪನಿಯ ‘ದಿ ಫಿಫ್ತ್ ಎಸ್ಟೇಟ್ ‘ ತನಿಖಾ ಕಾರ್ಯಕ್ರಮದ 45 ನಿಮಿಷಗಳ ಸುದೀರ್ಘ ಸಂಚಿಕೆಯನ್ನು ಭಾರತವು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಿದೆ.

ಈ ಸಾಕ್ಷ್ಯಚಿತ್ರದಲ್ಲಿ ಎಸ್ ಎಫ್ ಜೆ ನಾಯಕ ಗುರ್ಪತ್ವಂತ್ ಸಿಂಗ್ ಪನ್ನೂನ್ ಕೂಡ ಕಾಣಿಸಿಕೊಂಡಿದ್ದಾನೆ. ನಿಜ್ಜರ್ ಹತ್ಯೆಯಾದ ಸುಮಾರು ಒಂಬತ್ತು ತಿಂಗಳ ನಂತರ ಮಾರ್ಚ್ 8ರಂದು ಈ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಯಿತು. ಈ ಸಾಕ್ಷ್ಯಚಿತ್ರವು ಭಾರತದಲ್ಲಿ ಘೋಷಿತ ಭಯೋತ್ಪಾದಕನಾಗಿದ್ದ ನಿಜ್ಜರ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ತೋರಿಸಲಾಗಿದೆ.

Leave A Reply

Your email address will not be published.