Crime News: ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಸಲೂನ್ ಮಾಲಿಕ : ಪೊಲೀಸ್ ಎನ್ಕೌಂಟರ್ನಲ್ಲಿ ಸಾವು

ಉತ್ತರ ಪ್ರದೇಶದ ಬದೌನ್ ನಲ್ಲಿ ಸಲೂನ್ ಮಾಲಿಕ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಮಕ್ಕಳನ್ನು ಕೊಂದು ಮತ್ತೊಬ್ಬನನ್ನು ಗಂಭೀರವಾಗಿ ಗಾಯಗೊಳಿಸಿದ್ದ, ಈ ಸಂಬಂಧ ಪೊಲೀಸರು ದೂರು ದಾಖಲಿಸಿ ಅಪರಾಧಿಯ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಮಂಗಳವಾರ ರಾತ್ರಿ ಸಲೂನ್ ಮಾಲೀಕ ಪೊಲೀಸರ ಎನ್ಕೌಂಟರ್ನಲ್ಲಿ ಹತ್ಯೆಗೀಡಾಗಿದ್ದಾನೆ.

ಇದನ್ನೂ ಓದಿ: Javed Akhtar: ಮುಸ್ಲಿಂರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು- ಖ್ಯಾತ ಸಾಹಿತಿ ಜಾವೇದ್‌ ಅಖ್ತರ್‌ ನುಡಿ

ಮಂಡಿ ಸಮಿತಿ ಪೊಲೀಸ್ ಠಾಣೆಯ ಅಡಿಯಲ್ಲಿರುವ ಬಾಬಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ತನ್ನ ನೆರೆಮನೆಯವರ ಮನೆಗೆ ನುಗ್ಗಿ 11 ಮತ್ತು 6 ವರ್ಷದ ಇಬ್ಬರು ಸಹೋದರರ ಗಂಟಲು ಸೀಳಿ ಹತ್ಯೆ ಮಾಡಿದ್ದು, ಮೂರನೇ ಹುಡುಗನಿಗೆ ಗಂಭೀರವಾಗಿ ಗಾಯಗೊಳಿಸಿದ್ದಾನೆ .

ಇದನ್ನೂ ಓದಿ: Viral Video: ಅಸಹ್ಯ! ನಡುರಸ್ತೆಯಲ್ಲಿಯೇ ಹಸ್ತಮೈಥುನ ಮಾಡಿ ವೀರ್ಯವನ್ನು ಮಾರಾಟದ ಐಸ್‌ಕ್ರೀಂಗೆ ಬೆರೆಸಿದ

ಆರೋಪಿಯನ್ನು ಸಾಜಿದ್ ( 22 ) ಎಂದು ಗುರುತಿಸಲಾಗಿದೆ. ಈತ ಇಬ್ಬರು ಮಕ್ಕಳನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ. ಆದಾಗ್ಯೂ , ಯುಪಿ ಪೊಲೀಸರು ಶೋಧವನ್ನು ಪ್ರಾರಂಭಿಸಿದ್ದು ಈ ವೇಳೆ ಸಾಜಿದ್ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ. ಸ್ಥಳೀಯರ ಪ್ರಕಾರ , ಆರೋಪಿ ತನ್ನ ನೆರೆಹೊರೆಯವರಾದ ಸಲೂನ್ ನಡೆಸುತ್ತಿರುವ ವಿನೋದ್ ಕುಮಾರ್ ಅವರ ಕುಟುಂಬದೊಂದಿಗೆ ಆಗಾಗ್ಗೆ ವಿವಾದಗಳನ್ನು ಹೊಂದಿದ್ದ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದರೂ ಆದರೆ ಈ ವೇಳೆ ಆಕ್ರೋಶಗೊಂಡ ಸ್ಥಳೀಯರು ಶವಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡದೆ, ಶವಗಳನ್ನು ತೆಗೆದುಕೊಳ್ಳಲು ಬಂದ ಆಂಬ್ಯುಲೆನ್ಸ್ ಅನ್ನು ವಾಪಸ್ ಕಳುಹಿಸಿದ್ದಾರೆ.

Leave A Reply

Your email address will not be published.