Congress Meeting: ಕಾಂಗ್ರೆಸ್‌ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Manipur Miscreants: ಕಾಂಗ್ರೆಸ್‌ ಸಮಾವೇಶವೊಂದರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಮಣಿಪುರದ ಉಖ್ರುಲ್‌ನಲ್ಲಿ ನಡೆದಿದೆ.

ಇದನ್ನೂ ಓದಿ: Udupi: 3 ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ಯುವತಿಯ ಅಸಹಜ ವಿಡಿಯೋ ಚಿತ್ರೀಕರಣ ಪ್ರಕರಣ; ಜಿಲ್ಲಾ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಐಡಿ

ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯೊಂದನ್ನು ಉಖ್ರುಲ್‌ ಜಿಲ್ಲೆಯಲ್ಲಿ ನಡೆಸಿತ್ತು. ಅಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಲ್ಫ್ರೆಡ್‌ ಕಂಗಮ್‌ ಆರ್ಥರ್‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಆಲ್ಫ್ರೆಡ್‌ ಕಂಗಮ್‌ ಆರ್ಥರ್‌ ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: Dakshina Kannada: ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆರ್‌.ಪದ್ಮರಾಜ್‌, ಉಡುಪಿ-ಚಿಕ್ಕಮಗಳೂರು ಜಯಪ್ರಕಾಶ್‌ ಹೆಗ್ಡೆ ಆಯ್ಕೆ

ಮಾರ್ಚ್‌ 18 ರಂದು ಮಧ್ಯಾಹ್ನ 2 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಈ ಹಲ್ಲೆ ಘಟನೆ ನಡೆದಿದೆ.

ಅನಂತರ ಮಂಗಳವಾರ (ನಿನ್ನೆ) 11 ಗಂಟೆ ಸುಮಾರಿಗೆ ಟೀನೆಮ್‌ ಗ್ರಾಮದಲ್ಲಿ ದುಷ್ಕರ್ಮಿಗಳು ಶಸ್ತ್ರಸಜ್ಜಿತವಾಗಿ ಬಂದಿದ್ದು, ಮತ್ತೆ ದಾಳಿ ನಡೆಸಿದ್ದಾರೆ ಎಂದು ಎಂಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.

Leave A Reply

Your email address will not be published.