Drowned in Sea: ಮಂಗಳೂರು: ಸಮುದ್ರದಲ್ಲಿ ಮೀನು ಹಿಡಿಯಲೆಂದು ಹೋದ ವಿದ್ಯಾರ್ಥಿ ನೀರಿನ ರಭಸಕ್ಕೆ ಸಿಲುಕಿ ಸಾವು
![Drowned in Sea](https://hosakannada.com/wp-content/uploads/2024/03/IMG-20240322-WA0035.jpg)
Mangaluru: ಮಂಗಳೂರಿನ ತೋಟಬೆಂಗ್ರೆಯ ಕಡಲ ತೀರದಲ್ಲಿ ಮೀನು ಹಿಡಿಯಲೆಂದು ಹೋದ ವಿದ್ಯಾರ್ಥಿ ನೀರಿನ ರಭಸಕ್ಕೆ ಸಿಲುಕಿ ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವಿಗೀಡಾದ ಘಟನೆ ನಡೆದಿದೆ. ಪ್ರಜೀತ್ ಎಂ ತಿಂಗಳಾಯ (15) ಎಂಬಾತನೇ ಮೃತ ಬಾಲಕ.
![](https://hosakannada.com/wp-content/uploads/2024/07/First.jpeg)
ಇದನ್ನೂ ಓದಿ: Belthangady: ಮಂಗಳೂರು-ಹಾಸನ ಪೆಟ್ರೋನೆಟ್ ಡೀಸೆಲ್ ಪೈಪ್ಲೈನಿಗೆ ಕನ್ನ; ದೂರು ದಾಖಲು
![](https://hosakannada.com/wp-content/uploads/2024/07/Middle.jpeg)
ವಿದ್ಯಾಭ್ಯಾಸದ ಖರ್ಚಿಗೆಂದು ತಂದೆ ಜೊತೆ ಪ್ರಜೀತ್ ಕೂಡಾ ಮೀನುಗಾರಿಕೆಗೆ ಹೋಗುತ್ತಿದ್ದ. ಗುರುವಾರ ಸಂಜೆ ಕೂಡಾ ಮೀನುಗಾರಿಕೆಗೆಂದು ಹೋಗಿದ್ದ ಈತ ಈ ಸಂದರ್ಭದಲ್ಲಿ ಗಾಳಿ ಮತ್ತು ನೀರಿನ ರಭಸಕ್ಕೆ ಸಿಲುಕಿದ್ದು, ಸಮುದ್ರ ಪಾಲಾಗಿದ್ದ.
ತೀವ್ರ ಹುಡುಕಾಟದ ನಂತರ ಗಂಭೀರ ಸ್ಥಿತಿಯಲ್ಲಿ ಪ್ರಜೀತ್ ಪತ್ತೆಯಾಗಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದು, ಆದರೆ ದಾರಿ ಮಧ್ಯೆ ಮೃತ ಹೊಂದಿದ್ದಾನೆ ಎಂದು ವರದಿಯಾಗಿದೆ. ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.