Dakshina Kananda (Mangaluru): ನಂತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಸಂಪೂರ್ಣ ನಜ್ಜುಗುಜ್ಜು, ವ್ಯಕ್ತಿ ಸಾವು
![Dakshina Kananda (Mangaluru)](https://hosakannada.com/wp-content/uploads/2024/03/IMG-20240323-WA0046.jpg)
Mangaluru: ನಂತೂರಿನಲ್ಲಿ ತಡರಾತ್ರಿ ಭೀಕರ ಅಪಘಾತವೊಂದು ನಡೆದಿದ್ದು, ಈ ಅಪಘಾತದಲ್ಲಿ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (29) ಯಾನೆ ಬಂಟಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.
![](https://hosakannada.com/wp-content/uploads/2024/07/First.jpeg)
![](https://hosakannada.com/wp-content/uploads/2024/07/Middle.jpeg)
ನಿನ್ನೆ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಮಿತ್ ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತ ಹೊಂದಿದ್ದಾರೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: Uttar Pradesh: ಮದರಸಾ ಕಾಯ್ದೆ ಅಸಾಂವಿಧಾನಿಕ : ಹೈಕೋರ್ಟ್
ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.