K S Eshwarappa: ಮತ್ತೊಂದು ಹೊಸ ಘೋಘಣೆ ಹೊರಡಿಸಿದ ಈಶ್ವರಪ್ಪ !!
![K S Eshwarappa](https://hosakannada.com/wp-content/uploads/2024/03/IMG-20240326-WA0049.jpg)
K S Eshwarappa: ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರವಾಗಿ ಸ್ಪರ್ಧಿಸೋದು ಫಿಕ್ಸ್ ಆಗಿದೆ. ಬ್ರಹ್ಮ ಬಂದರೂ ನಿರ್ಧಾರ ಬದಲಿಸಲ್ಲ ಎಂದಿದ್ದಾರೆ. ಈ ಬೆನ್ನಲ್ಲೇ ಈಶ್ವರಪ್ಪನವರು(K S Eshwarappa)ಮತ್ತೊಂದು ಘೋಷಣೆ ಮಾಡಿದ್ದಾರೆ.
![](https://hosakannada.com/wp-content/uploads/2024/07/First.jpeg)
ಪಕ್ಷೇತರ ಸ್ಪರ್ಧೆಗೆ ಮುಂದಾಗಿರುವ ಈಶ್ವರಪ್ಪನವರು ಇದೀಗ ಕ್ಷೇತ್ರದ ಮಠ-ಮಂದಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಇಂದು ಅವರು ಬಾಳೆಹೊನ್ನೂರಿನ ರಂಬಾಪುರಿ ಮಠಕ್ಕೆ ಭೇಟಿ ನೀಡಿ ಮಾಧ್ಯಮಗಳಿಗೆ ಕೆಲವು ಹೇಳಿಕೆ ನೀಡಿದರು.
![](https://hosakannada.com/wp-content/uploads/2024/07/Middle.jpeg)
ಈ ವೇಳೆ ಮಾತನಾಡಿದ ಅವರು ‘ನನ್ನ ಚುನಾವಣಾ ಸ್ಪರ್ಧೆ 100ಕ್ಕೆ 100 ಖಚಿತ. ನಾನು ಯಾವ ಸಂಧಾನಕ್ಕೂ ಒಪ್ಪುವುದಿಲ್ಲ. ಯಡಿಯೂರಪ್ಪನವರ(B S Yadiyurappa)ಬಗ್ಗೆ ಏನೇ ಇದ್ದರೂ ಹೊರಗಡೆ ಮಾತನಾಡುತ್ತೇನೆ” ಎಂದು ತಿಳಿಸಿದರು.
ಇನ್ನು ಇದುವರೆಗೂ ಯಡಿಯೂರಪ್ಪರ ಪ್ರಭಾವದಿಂದ ರಾಜಕೀಯ ಮಾಡಿಕೊಂಡು ಬಂದಿರುವ ಈಶ್ವರಪ್ಪನವರು ಇದೀಗ ಯಡಿಯೂರಪ್ಪರ ತವರಿನಲ್ಲೇ ಅವರನ್ನು ಎದುರು ಹಾಕಿಕೊಳ್ಳುತ್ತಿರುವುದು, ಅವರ ವಿರುದ್ಧ ಗೆಲುವು ಸಾಧಿಸುವುದು ಅಷ್ಟು ಸುಲಭದ ಮಾತಲ್ಲ ಎಂದು ಹೇಳಲಾಗುತ್ತಿದೆ.