Udupi Nejaru Case: ಆರೋಪಿ ಪ್ರವೀಣ್ ಚೌಗುಲೆಗೆ ಜಾಮೀನು ನಿರಾಕರಣೆ
![Udupi Nejaru Case](https://hosakannada.com/wp-content/uploads/2024/03/IMG-20240330-WA0036.jpg)
Udupi Nejaru Case: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಈ ಕುರಿತು ಇಂದು ಆದೇಶ ನೀಡಿದೆ.
![](https://hosakannada.com/wp-content/uploads/2024/07/First.jpeg)
ಇದನ್ನೂ ಓದಿ: Mangaluru: ಹಿಂದುತ್ವದ ಕೋಟೆ ಬೇಧಿಸಿ ಈ ಬಾರಿ ಜಯ; ಕಾಂಗ್ರೆಸ್ ತೆಕ್ಕೆಗೆ ಕ್ಷೇತ್ರ- ಅಭಯಚಂದ್ರ ಜೈನ್
![](https://hosakannada.com/wp-content/uploads/2024/07/Middle.jpeg)
ಪ್ರವೀಣ್ ಚೌಗುಲೆ ಮಾ.13 ರಂದು ಎರಡನೇ ಬಾರಿಗೆ ಜಾಮೀನು ಅರ್ಜಿ ಹಾಕಿದ್ದು, ಈ ಅರ್ಜಿಗೆ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27 ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿ ಪರ ವಕೀಲರಾದ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದ ನಡೆಯಿತು. ನಂತರ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೂನು ಅರ್ಜಿಯ ನಿರಾಕರಣೆಯ ಆದೇಶವನ್ನು ನೀಡಿದರು.
1 Comment
2n8s9c