Tejaswini Gowda: ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಜಿ ಸಂಸದೆ ತೇಜಸ್ವಿನಿ ಗೌಡ

Tejaswini Gowda: ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂರು ದಿನಗಳ ನಂತರ, ಮಾಜಿ ಪತ್ರಕರ್ತೆ ತೇಜಸ್ವಿನಿ ಗೌಡ ಅವರು ಶನಿವಾರ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪವನ್ ಖೇರಾ ಮತ್ತು ಸಂಸದ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸದಿದ್ದಕ್ಕೆ ಬೇಸರಗೊಂಡು ಬಿಜೆಪಿ ತೊರೆದಿದ್ದಾರೆ.

ಇದನ್ನೂ ಓದಿ: Uttar Pradesh: ಹಿಂದೂ ಸಾಧುವನ್ನು ಮನಬಂದಂತೆ ಥಳಿಸಿ ಹಲ್ಲೆ ನಡೆಸಿದ ಪಾಪಿಗಳು – ಭಯಾನಕ ವಿಡಿಯೋ ವೈರಲ್!!

2004 ರಿಂದ 2009 ರವರೆಗೆ ಕಾಂಗ್ರೆಸ್‌ ಸಂಸದರಾಗಿದ್ದ ತೇಜಸ್ವಿನಿ ಗೌಡ ಅವರು ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು 2014 ರಲ್ಲಿ ಬಿಜೆಪಿ ಸೇರಿದರು. 2018 ರಲ್ಲಿ ಬಿಜೆಪಿಯಿಂದ ವಿಧಾನ ಸಭಾ ಕ್ಷೇತ್ರದಿಂದ ಪರಿಷತ್ತಿಗೆ ಆಯ್ಕೆಯಾಗಿದ್ದರು.

“ಕರ್ನಾಟಕ ರಾಜಕೀಯದಲ್ಲಿ ಸಕ್ರಿಯ ನಾಯಕಿರಾಗಿರುವ ತೇಜಸ್ವಿನಿ ಗೌಡ ಅವರನ್ನು ನಾವು ಕಾಂಗ್ರೆಸ್‌ಗೆ ಮರಳಿ ಸ್ವಾಗತಿಸುತ್ತೇವೆ. ತೇಜಸ್ವಿನಿ ಅವರು ಮುಂಬರುವ ಚುನಾವಣೆಯಲ್ಲಿ ಸಕ್ರಿಯರಾಗುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ರಮೇಶ್ ಹೇಳಿದರು.

ಇದನ್ನೂ ಓದಿ: High Court: ಕಾನೂನು ಗೌರವಿಸದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯವು ಯಾವುದೇ ಸಹಾನುಭೂತಿ ತೋರಿಸಲು ಸಾಧ್ಯವಿಲ್ಲ : ಕರ್ನಾಟಕ ಹೈಕೋರ್ಟ್

ತೇಜಸ್ವಿ ಗೌಡ ತಮ್ಮ ಹೇಳಿಕೆಯಲ್ಲಿ, “ಕಾಂಗ್ರೆಸ್ ಕೇವಲ ಮಾತನ್ನು ನಂಬದೆ ಕ್ರಿಯೆಯನ್ನು ನಂಬುತ್ತದೆ. ಇದು ಉತ್ತಮ ಸಮಯ, ಮತ್ತು ಪ್ರಾಮಾಣಿಕವಾಗಿ, ನಾನು ಪಕ್ಷಕ್ಕಾಗಿ ಕೆಲಸ ಮಾಡಲು ಬಯಸುತ್ತೇನೆ. ಸಾಂವಿಧಾನಿಕ ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ,” ಎಂದು ಆರೋಪಿಸಿದರು.

Leave A Reply

Your email address will not be published.