DK Shivakumar: ಸುಮಲತಾ ಅವರ ಸುದ್ದಿಗೆ ನಾವು ಹೋಗುವುದಿಲ್ಲ, ಅವರ ಅವಶ್ಯಕತೆಯೂ ನಮಗಿಲ್ಲ : ಡಿಕೆಶಿ
![DK Shivakumar](https://hosakannada.com/wp-content/uploads/2024/04/IMG-20240402-WA0000.jpg)
DK Shivakumar: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ, ರಾಜಕೀಯ ನಾಯಕರು ಪರಸ್ಪರರ ಮೇಲೆ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಈ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಾವು ಸಂಸದೆ ಸುಮಲತಾ ಅಂಬರೀಶ್ ಅವರ ಸುದ್ದಿಗೆ ಹೋಗುವುದಿಲ್ಲ. ನಮಗೆ ಅವರ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದಾರೆ.
![](https://hosakannada.com/wp-content/uploads/2024/07/First.jpeg)
ವಿಷ ಹಾಕಿರುವ ಕುರಿತು ಮಾತನಾಡಿರುವುದು ಹೆಚ್.ಡಿ. ಕುಮಾರಸ್ವಾಮಿ ಅವರು. ಸುಮಲತ ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ಸುಮಲತಾ ಅವರು ಕುಮಾರಸ್ವಾಮಿ ಅವರು ನನಗೆ ವಿಷ ಹಾಕಿದ್ದರು ಎಂದಿದ್ದರು. ಯಾವ ವಿಷ ಎಂದು ಕುಮಾರಸ್ವಾಮಿರವರನ್ನು ಕೇಳಿದ್ದೆ. ಸುಮಲತಾ ಅವರ ಸುದ್ದಿಗೆ ನಾನು ಹಿಂದೆಂದೂ ಹೋಗಿಲ್ಲ, ಮುಂದೆಯೂ ಹೋಗುವುದು ಇಲ್ಲ ಎಂದರು.
ಈ ಹಿಂದೆ ಕಾಂಗ್ರೆಸ್ ಪಕ್ಷ ಅಂಬರೀಶ್ ಅವರಿಗೆ ಏನೆಲ್ಲಾ ಕೊಟ್ಟಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಂಬರೀಶ್ ಅವರು ಸಾಯುವ ಮುನ್ನ ಏನು ಹೇಳಿದ್ದಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಡಿಕೆಶಿ ಹೇಳಿದರು.