Soujanya Fight Committee: ಸೌಜನ್ಯ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ; ನೋಟ ಅಭಿಯಾನ

Soujanya Fight Committee: ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಗಿರೀಶ್‌ ಮಟ್ಟಣ್ಣನವರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ (ಇಂದು) ಈ ಪತ್ರಿಕಾಗೋಷ್ಠಿ ನಡೆದಿದ್ದು, ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ ನೀಡದ ಕಾರಣ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯುವ ಉದ್ದೇಶವಿದೆ. ದ.ಕ ಮತ್ತು ಉಡುಪಿಯಲ್ಲಿ ಪ್ರತಿ ವಿಧಾನಸಣಾ ಕ್ಷೇತ್ರವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸುಳ್ಯದಲ್ಲಿ ಈ ಕುರಿತು ಎ.24 ರಂದು ನೋಟ ಜನಜಾಗೃತಿ ಸಭೆ ಇದೆ ಎಂದು ಅವರು ಹೇಳಿದ್ದಾರೆ.

Leave A Reply

Your email address will not be published.