of your HTML document.

Gadag: RSS ಗಣವೇಷದಲ್ಲೇ ಕಾಂಗ್ರೆಸ್ ಸೇರ್ಪಡೆಯಾದ BJP ನಾಯಕ !!

 

Gadag: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ(Parliament Election) ಕಾವು ರಂಗೇರಿದೆ. ದಿನದಿಂದ ದಿನಕ್ಕೆ ಪ್ರಚಾರದ ಅಬ್ಬರ ಜೋರಾಗುತ್ತಿದೆ. ಬಿಜೆಪಿ-ಜೆಡಿಎಸ್(BJP-JDS), ಕಾಂಗ್ರೆಸ್ ಪಕ್ಷಗಳು ಗೆಲುವಿಗಾಗಿ ತಂತ್ರದ ಮೇಲೆ ತಂತ್ರ ಹೆಣೆಯುತ್ತಿವೆ. ಈ ನಡುವೆ ಭಾರೀ ಅಚ್ಚರಿ ಹಾಗೂ ವಿಚಿತ್ರ ಘಟನೆಯೊಂದು ನಡೆದಿದ್ದು, ಬಿಜೆಪಿ ನಾಯಕರೊಬ್ಬರು RSS ಗಣವೇಶದಲ್ಲಿಯೇ ಬಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಹೌದು, ಇಂದು (ಏಪ್ರಿಲ್ 10) ಗದಗ(Gadag) ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಆರ್​ಎಸ್​ಎಸ್​ ಸ್ವಯಂ ಸೇವಕ ಹಾಗೂ ಬಿಜೆಪಿ(BJP) ನಾಯಕರಾದ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್(Ningabasappa Banad) ಎನ್ನುವವರು ತಮ್ಮ ಮಾತೃ ಸಂಸ್ಥೆ RSS ನ ಗಣವೇಶದಲ್ಲಿಯೇ ಬಂದು ಕಾಂಗ್ರೆಸ್​ ಸೇರ್ಪಡೆಯಾದರು. ಮೂವತ್ತು ವರ್ಷದಿಂದ ಆರ್​ಎಸ್​ಎಸ್ ಸಕ್ರೀಯ ಕಾರ್ಯಕರ್ತರಾಗಿರುವ ಬಾಣದ್ ಅವರು ಗಣವೇಷದಲ್ಲೇ ಕಾಂಗ್ರೆಸ್​​ ಶಾಲು ಹಾಕಿಸಿಕೊಂಡಿರುವುದು ವಿಶೇಷ ಎನ್ನಲಾಗಿದೆ.

ಅಂದಹಾಗೆ ಮಾಜಿ ಶಾಸಕ ಎಸ್​ಜಿ ನಂಜಯ್ಯನಮಠ ಸಮ್ಮುಖದದಲ್ಲಿ ನಿಂಗಬಸಪ್ಪ ಬಾಣದ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು . ಇನ್ನು ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವ ಬಿಆರ್ ಯಾವಗಲ್ ಅವರು ನಿಂಗಬಸಪ್ಪ ಬಾಣದ್ ಅವರ ತಲೆ ಮೇಲಿನ ಕಪ್ಪು ಟೋಪಿ ತೆಗೆದು ಖಾದಿ ಗಾಂಧಿ ಟೋಪಿ ಹಾಕಿ ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಮಾಡಿಕೊಂಡರು. RSS ಕಾರ್ಯಕರ್ತನೊಬ್ಬನ ಈ ವಿಚಿತ್ರ ಬೆಳವಣಿಗೆ ರಾಜ್ಯದಲ್ಲಿ ಭಾರೀ ಅಚ್ಚರಿ ಮೂಡಿಸಿದೆ.

6 Comments
  1. Тут можно преобрести сео продвижение медицинского сайта seo под ключ

  2. Тут можно преобрести seo-продвижение медицинских сайтов сео продвижение медицинского сайта

  3. Тут можно преобрести сейфы оружейные сейф охотничий купить

  4. Тут можно преобрести сейфы взломостойкие купить сейф взломостойкий в москве

  5. Тут можно преобрести сейф взломостойкий сейф банковский взломостойкий

  6. pdacenter.ru – сервис по ремонту бытовой техники
    Ремонт телефонов в Екатеринбурге в официальном сервисном центре PDACENTER.
    Наши инженеры выполняют ремонт любой сложности по дотупным ценам!

Leave A Reply

Your email address will not be published.