Rama Navami Procession: ರಾಮನವಮಿ ಮೆರವಣಿಗೆ ವೇಳೆ ಹಿಂದೂಗಳ ಮೇಲೆ ಮುಸ್ಲಿಮರಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

Rama Navami Procession: ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿಯೂ ಕಲ್ಲುತೂರಾಟ ನಡೆದಿದೆ. ಕಳೆದ ವರ್ಷವೂ ಇದು ನಡೆದಿತ್ತು. ರಾಮನವಮಿ ಮೆರವಣಿಗೆ ವೇಳೆ ಈ ಬಾರಿ ಸ್ಫೋಟ ಸಂಭವಿಸಿದ್ದು, ಮೆರವಣಿಗೆ ನಡೆಸುವವರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಇದನ್ನೂ ಓದಿ: Puttur: ಜೀಪ್‌ ಮತ್ತು ಬೈಕ್‌ ನಡುವೆ ಡಿಕ್ಕಿ; ಜಾತ್ರೆಯಿಂದ ಹಿಂದಿರುಗುವ ಸಂದರ್ಭ ದುರ್ಘಟನೆ, ಓರ್ವ ಮೃತ್ಯು, ಮಕ್ಕಳಿಗೆ ಗಾಯ

ಈ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಪರಿಸ್ಥಿತಿ ಸಂಪೂರ್ಣ ಉದ್ವಿಗ್ನಗೊಂಡಿದೆ. ಶಂಕಾಸ್ಪದ ಸ್ಫೋಟ, ಕಲ್ಲುತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು. ಅಶ್ರವಾಯು ಮೂಲಕ ಜನರನ್ನು ಚದುರಿಸಲು ಪ್ರಯತ್ನಿಸಲಾಗಿದೆ.

ಇದನ್ನೂ ಓದಿ: Black Elbows: ಕಪ್ಪು ಮೊಣಕೈ ಇರುವವರು ಏನು ಮಾಡಬೇಕು? : ಹೀಗೆ ಮಾಡಿ ಕಪ್ಪುಕಲೆ ಮಾಯವಾಗುತ್ತೆ

ಸಾವಿರಾರು ಹಿಂದುಗಳು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿರುವ ಶಕ್ತಿಪುರ ಪ್ರದೇಶದಲ್ಲಿ ರಾಮನವಮಿ ಪ್ರಯುಕ್ತ ಮೆರವಣಿಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಚಾವಣಿ ಮೇಲೆ ನಿಂತ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಮುಸ್ಲಿಮರೇ ಈ ಕೃತ್ಯ ಎಸಗಿರುವುದಾಗಿ ವರದಿಯಾಗಿದೆ. ಕಲ್ಲು ತೂರಾಟ ನಡೆಸಿದಾಗ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇವರು ಕೂಡಾ ಕಲ್ಲು ತೂರಾಟ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

1 Comment
  1. […] Rama Navami Procession: ರಾಮನವಮಿ ಮೆರವಣಿಗೆ ವೇಳೆ ಹಿಂದೂ… […]

Leave A Reply

Your email address will not be published.