HomeNewsMadikeri: ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ರದ್ದು

Madikeri: ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ರದ್ದು

Hindu neighbor gifts plot of land

Hindu neighbour gifts land to Muslim journalist

Madikeri: ಮದುವೆ ಹಿಂದಿನ ದಿನ ಸಿಹಿ ತಿಂಡಿ ನೀಡಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವಿಲಕ್ಷಣ ಘಟನೆಯೊಂದು ಮಡಿಕೇರಿಯ ಕಲ್ಯಾಣಮಂಟಪದಲ್ಲಿ ನಡೆದಿದೆ.

ಇದನ್ನೂ ಓದಿ: NEET 2024: ನೀಟ್ 2024 ರ ಕ್ವೆಶ್ಚನ್ ಪೇಪರ್ ಲೀಕ್, ತಳಮಳದಲ್ಲಿ ಅರ್ಹ ಅಭ್ಯರ್ಥಿಗಳು !

ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹವು ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿತ್ತು. ಮೇ.5 ರಂದು ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ವಿವಾಹ ನಿಗದಿಯಾಗಿತ್ತು.

ತುಮಕೂರಿನಿಂದ ವರನ ಕಡೆಯವರು ಶನಿವಾರ ಸಂಜೆ ಮಂಟಪಕ್ಕೆ ಬಂದಿದ್ದರು. ಆದರೆ ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆಯಲಾಗಿದ್ದು, ಗಲಾಟೆ ಶುರುವಾಗಿದೆ. ಮಂಟಪದಲ್ಲಿಯೇ ತಳ್ಳಾಟ, ನೂಕಾಟ ನಡೆದಿದೆ.

ಇದನ್ನೂ ಓದಿ: Australia: ಸಂಸದೆಗೆ ಡ್ರಗ್ಸ್ ನೀಡಿ ಲೈಂಗಿಕವಾಗಿ ಹಿಂಸೆ – ವಿಡಿಯೋ ವೈರಲ್ !!

ಮರುದಿನ ಬೆಳಗ್ಗೆ ಅಂದರೆ ರವಿವಾರ ಪ್ರಕರಣ ಪೊಲೀಸ್‌ ಠಾಣೆಗೆ ಹೋಗಿದೆ. ಶನಿವಾರ ಮದುವೆ ಬೇಡ ಎಂದು ಉಂಗುರ ಕಳಚಿಟ್ಟಿದ್ದ ವರ ರವಿವಾರ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಪ್ರಾರಂಭಿಸಿದ್ದ. ಆದರೆ ಈ ದಿಢೀರ್‌ ಘಟನೆಯಿಂದ ವಧು ಮದುವೆಯೇ ಬೇಡ ಎಂದು ಪೊಲೀಸರಲ್ಲಿ ಹೇಳಿಕೆ ನೀಡಿದ್ದಾಳೆ.

ಮದುವೆಗೆ ಖರ್ಚು ಮಾಡಿದ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಪೊಲೀಸ್‌ ಠಾಣೆ ಮುಂದೆ ಹೇಳಿದ್ದಾರೆ. ನಂತರ ಹಣಕಾಸಿನ ವಿಚಾರ ನೀವೇ ನೋಡ್ಕೊಳ್ಳಿ ಎಂದು ಪೊಲೀಸರು ಪ್ರಕರಣಕ್ಕೆ ಅಂತ್ಯ ಹಾಡಿದರು.

RELATED ARTICLES

1 COMMENT

Most Popular

Recent Comments