Home Entertainment Comedy Kiladigalu: ಕಾಮಿಡಿ ಕಿಲಾಡಿಗಳು ಸೀಸನ್ -7: ಪುತ್ತೂರಿನ ಎರಡು ಮುತ್ತುಗಳು ಸೆಲೆಕ್ಟೆಡ್ !!

Comedy Kiladigalu: ಕಾಮಿಡಿ ಕಿಲಾಡಿಗಳು ಸೀಸನ್ -7: ಪುತ್ತೂರಿನ ಎರಡು ಮುತ್ತುಗಳು ಸೆಲೆಕ್ಟೆಡ್ !!

Comedy Kiladigalu

Hindu neighbor gifts plot of land

Hindu neighbour gifts land to Muslim journalist

Comedy kiladigalu: ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ಜೀ ಕನ್ನಡ ವಾಹಿನಿ ಸಿದ್ಧತೆ ನಡೆಸಿದೆ. ಹೌದು, ಕಾಮಿಡಿ ಕಿಲಾಡಿಗಳು (Comedy kiladigalu) ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್‌ ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್  ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ರವರು ಜಡ್ಜಸ್‌ಗಳಾಗಿದ್ದಾರೆ. ವಿಶೇಷ ಅಂದ್ರೆ ಕಿಲಾಡಿ ಪ್ಲೇಯರ್‌ಗಳಲ್ಲಿ  ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.

ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದ 2,500ಕ್ಕು ಮಿಕ್ಕಿ ಸ್ಪರ್ಧಿಗಳ ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ.

ಪುತ್ತೂರಿನ ಪವಿತ್ರ ಹೆಗ್ಡೆ  ಬಗ್ಗೆ ಹೇಳುವುದಾದರೆ, ಇವರು ಪುತ್ತೂರು ಚಂದ್ರಶೇಖ‌ರ್ ಹೆಗ್ಡೆ ಮತ್ತು ಮಾಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ ಮಾಡಿದ್ದಾರೆ. ಇನ್ನು ತುಳು ಸಿನೆಮಾ ಮತ್ತು ತುಳು ಮತ್ತು ಕನ್ನಡ ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ.

ಇದನ್ನೂ ಓದಿ: Jyothi Rai: ಕರಾವಳಿ ಮೂಲದ ಕನ್ನಡದ ಸ್ಟಾರ್ ನಟಿಯದ್ದು ಎನ್ನಲಾದ ಖಾಸಗಿ ವಿಡಿಯೊ ವೈರಲ್; ಸಾಮಾಜಿಕ ಮಾಧ್ಯಮಗಳಲ್ಲಿ ಅಲ್ಲೋಲ ಕಲ್ಲೋಲ !

ಕನ್ನಡ ಕಸ್ತೂರಿ ಚಾನಲ್‌ನಲ್ಲಿ ಪ್ರಸಾರವಾಗುತ್ತಿದ್ದ ಕಂಜೂಸ್ ಕಮಂಗಿರಾಯ, ಕುಡ ತೆಲಿಪುಗ, ಡಾಯಿಜಿ ವರ್ಲ್ಡ್‌ನಲ್ಲಿ ಪ್ರಸಾರವಾಗುತ್ತಿದ್ದ ಬಾಬಣ್ಣ ಬೂಬಣ್ಣ, ಕಿರುಚಿತ್ರವಾದ ಕಲ್ಕುಡ ಕಲ್ಲುರ್ಟಿ, ವಾತ್ಸಲ್ಯ, ನೋ ಬಾಲ್, ಕೊಕೊನಾಟ್ ಸಹಿತ ಹಲವು ಚಲನಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಇವರಿಗೆ ಹಲವಾರು ಸನ್ಮಾನ ಪತ್ರಗಳು ಲಭಿಸಿದೆ. ಮುಖ್ಯವಾಗಿ ನಮ್ಮ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಬಲೆತಲಿಪಾಲೆ’ ಸೀಸನ್ 7ರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿ4 ನ್ಯೂಸ್‌ನಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 2ನಲ್ಲಿ ಮತ್ತು ಸೀಸನ್ 3ಯಲ್ಲಿ ಅಭಿನಯಿಸಿ ಬೆಸ್ಟ್ ಫರ್ಫಾಮೆನ್ಸ್ ಅವಾರ್ಡ್ ಕೂಡಾ ಪಡೆದಿದ್ದಾರೆ. ವಿದೇಶದಲ್ಲೂ ನಾಟಕ ಪ್ರದರ್ಶನ ನೀಡಿದ್ದಾರೆ.

ಇನ್ನೊಬ್ಬರು ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಟಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದು, ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಇನ್ನು ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್ಕ್ ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಆಲಿಯಾ ಭಟ್‌ ಗೆ ಮತ್ತೊಮ್ಮೆ ಸಂಕಷ್ಟ! ಡೀಪ್‌ಫೇಕ್‌ ವಿಡಿಯೋ ವೈರಲ್ ಚೆಲುವೆ ಯಾರವಳು?