Bengaluru: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ, ವೀಡಿಯೋ ವೈರಲ್!

Bengaluru: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಗ್ಗಲಿಪುರದ ಬಳಿ ನಡೆದಿದೆ.

ಇದನ್ನೂ ಓದಿ: Preta Maduve: ‘ಪ್ರೇತ ಮದುವೆ’ಗೆ ವರ ಬೇಕೆಂದು ಜಾಹಿರಾತು ಪ್ರಕಟ – ಬಂತು 50ಕ್ಕೂ ಹೆಚ್ಚು ಪ್ರತಿಕ್ರಿಯೆ!!

ಚೇತನ್ ಚಂದ್ರ ಅವರನ್ನು ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿ ಯುವಕರು, ತಮ್ಮ ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದ್ದಾರೆ. ಕಿಡಿಗೇಡಿಗಳ ಹಲ್ಲೆಯಿಂದ ಮೂಗಿಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ..ಅಲ್ಲದೇ ಈ ವೇಳೆ ಚೇತನ್ ಚಂದ್ರರವರ ಚೈನ್ ಒಂದನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ರೋಚಕ ಟ್ವಿಸ್ಟ್- JDS ಶಾಸಕನಿಂದಲೇ ನಡೆಯಿತಾ ಕುತಂತ್ರ?!

ತದನಂತರ ನಟ ಚೇತನ್ ಚಂದ್ರರವರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಲು ತೆರಳಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ನಟ ತನ್ನ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಟ ಚೇತನ್ ಚಂದ್ರರವರು ಪ್ರೇಮಿಸಂ, ಪಿಯುಸಿ, ರಾಜಧಾನಿ, ಕುಂಭರಾಶಿ ಚಿತ್ರದಲ್ಲಿ ನಟಿಸಿದ್ದಾರೆ.

Leave A Reply

Your email address will not be published.