Mangaluru: ಕರ್ನಾಟಕದಲ್ಲಿ ಸಾಲು ಸಾಲಾಗಿ ಹಿಂದೂ ಯುವತಿಯರ ಹತ್ಯೆ – ಆರೋಪಿಗಳ ವಿರುದ್ಧ ಎನ್ಕೌಂಟರ್ ಅಸ್ತ್ರ ಉಪಯೋಗಿಸಿ – ವಿಶ್ವ ಹಿಂದೂ ಪರಿಷದ್ ಆಗ್ರಹ.
![Mangaluru](https://hosakannada.com/wp-content/uploads/2024/05/IMG-20240515-WA0044.jpg)
Mangaluru: ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ಪ್ರೀತಿಗಾಗಿ 3 ಯುವತಿಯರ ಹತ್ಯೆ, ಏಪ್ರಿಲ್ 18 ರಂದು ಹುಬ್ಬಳ್ಳಿಯ ನೇಹಾ ಹತ್ಯೆ, ನಂತರ ಕೊಡಗಿನಲ್ಲಿ ಮೀನಾ ಹತ್ಯೆ, ಇದೀಗ ಮೇ 15ರಂದು ಹುಬ್ಬಳ್ಳಿಯ ಅಂಜಲಿ ಹತ್ಯೆ. ಪ್ರೀತಿಯ ಹೆಸರಲ್ಲಿ ಯುವತಿಯರ ಹತ್ಯೆ ಆಗುತ್ತಿರುವುದು ಬಹಳ ಕಳವಳಕಾರಿ ಸಂಗತಿಯಾಗಿದ್ದು ನಾಗರಿಕ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ.
![](https://hosakannada.com/wp-content/uploads/2024/07/First.jpeg)
![](https://hosakannada.com/wp-content/uploads/2024/07/Middle.jpeg)
2013 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಬಂದಾಗ ಸಾಲು ಸಾಲು ಹಿಂದೂ ಯುವಕರ ಹತ್ಯೆಯಾಗಿದ್ದು ಇದೀಗ ಇದೇ ಸರಕಾರದಲ್ಲಿ ಹಿಂದೂ ಯುವತಿಯರ ಹತ್ಯೆ ಆಗುತ್ತಿರುವುದು ಗಂಭೀರ ವಿಷಯವಾಗಿದೆ.
ಇದನ್ನೂ ಓದಿ: Cleaning Tips: ನೊಣಗಳ ಕಾಟದಿಂದ ಮುಕ್ತಿ ಪಡೆಯಲು ಸುಲಭ ಪರಿಹಾರ ಇಲ್ಲಿದೆ!
ಈ ಕೃತ್ಯಗಳು ಕರ್ನಾಟಕದಲ್ಲಿ ಹೆಣ್ಣು ಮಕ್ಕಳನ್ನು ಭಯಭೀತಗೊಳಿಸಿದೆ. ರಾಜ್ಯ ದಲ್ಲಿ ಈ ಸರಕಾರ ಬಂದನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹಾಗಾಗಿ ರಾಜ್ಯ ಪೋಲಿಸ್ ಇಲಾಖೆಯು ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಂತಕರಿಗೆ ಎನ್ಕೌಂಟರ್ ನಂತಹ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೆನೆ ಎಂದು ವಿಶ್ವ ಹಿಂದೂ ಪರಿಷದ್ ಶರಣ್ ಪಂಪ್ವೆಲ್ ಹೇಳಿದ್ದಾರೆ.
[…] […]