Chikkamagaluru: ಬೇಟೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಯುವಕ ಸಾವು

Share the Article

Chikkamagaluru : ಬೇಟೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಂದೂಕಿನಿಂದ ಹೊರಟ ಗುಂಡು ತಗುಲಿ ಯುವಕನೊಬ್ಬ ಸಾವಿಗೀಡಾದ ಘಟನೆ ಗುರುವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ..

ಇದನ್ನೂ ಓದಿ: Bantwala: ಬಾವಿಗೆ ಬಿದ್ದ ಮಗು ರಕ್ಷಿಸಿದ ಯುವಕ : ಉಮೇಶ್ ಮಠದಬೆಟ್ಟು ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

ಮೃತಪಟ್ಟ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು ಹೇಳಲಾಗಿದೆ. ಎದೆಗೆ ತೋಟದ ಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿತ್ತು ಎನ್ನಲಾಗಿದೆ.ಮೃತದೇಹದ ಸಮೀಪ ತೋಟದ ಬೇಲಿಯಲ್ಲಿ ತೋಟೆ ಕೋವಿ ಪತ್ತೆಯಾಗಿದೆ.

ಇದನ್ನೂ ಓದಿ: Bengaluru: ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ : ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

ಈ ಕುರಿತು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply