Ayodhya: ಅಯೋಧ್ಯೆಯ ಭವ್ಯ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಅರ್ಚಕ ನಿಧನ !!
![Ayodhya](https://hosakannada.com/wp-content/uploads/2024/06/IMG-20240622-WA0027.jpg)
Ayodhya: ಅಯೋಧ್ಯೆಯ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನರೆವೇರಿಸಿದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ. ಪ್ರಧಾನಿ ಮೋದಿ(PM Modi), ಯುಪಿ ಸಿಎಂ ಯೋಗಿ ಆದಿತ್ಯನಾಥ್(CM Yogi Adithyanath) ಸಂತಾಪ ಸೂಚಿಸಿದ್ದಾರೆ.
H D Kumarswamy: ಸೂರಜ್ ರೇವಣ್ಣನ ಅಸಹಜ ಲೈಂಗಿಕ ಪ್ರಕರಣ – ಕೇಂದ್ರ ಸಚಿವ ಕುಮಾರಸ್ವಾಮಿ ರಿಯಾಕ್ಷನ್ ಹೀಗಿತ್ತು!!
86 ವರ್ಷದ ಲಕ್ಷ್ಮಿಕಾಂತ್ ದೀಕ್ಷಿತ್(Lakshmikantn Deekshith) ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲಿದ್ದರು. ಇಂದು(ಜೂ.22) ಬೆಳಗ್ಗೆ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಣಿಕಾಂತ್ ಘಾಟ್ನಲ್ಲಿ ಸಕಲ ಗೌರವಗೊಳಿಂದಿಗೆ ಲಕ್ಷ್ಮಿಕಾಂತ್ ದೀಕ್ಷಿತ್ ಅಂತ್ಯಕ್ರಿಯೆ ನಡೆಯಲಿದೆ.
ವಾರಾಣಸಿಯ(Varansi) ಹಿರಿಯ ವಿದ್ವಾಂಸರಲ್ಲಿ ಒಬ್ಬರು ಎನಿಸಿಕೊಂಡಿದ್ದ ದೀಕ್ಷಿತ್ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸೇರಿದವರು. ಆದರೆ, ಅವರ ಕುಟುಂಬ ಅನೇಕ ತಲೆಮಾರುಗಳಿಂದ ವಾರಾಣಸಿಯಲ್ಲಿ ವಾಸಿಸುತಿತ್ತು. ಜನವರಿಯಲ್ಲಿ, ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಪೂಜೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ನೇತೃತ್ವದಲ್ಲಿಯೇ ಎಲ್ಲ ಪೂಜೆಗಳು ನೆರವೇರಿದವು.
Petrol-Diesel : GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ?! ನಿರ್ಮಲ ಸೀತಾರಾಮ್ ಮಹತ್ವದ ಹೇಳಿಕೆ !!