Pune Porsche Crash: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ; ಅಪ್ರಾಪ್ತ ಬಾಲಕನಿಗೆ ಜಾಮೀನು ಮಂಜೂರು

Share the Article

Pune Porsche Crash: ಪುಣೆ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಮೇ 19ರಂದು ಬೆಳಗ್ಗೆ ಪುಣೆಯ ಕಲ್ಯಾಣಿ ನಗರದಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಪೋರ್ಷೆ ಕಾರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು. ಮದ್ಯದ ಅಮಲಿನಲ್ಲಿ 17 ವರ್ಷದ ಹದಿಹರೆಯದ  ಆರೋಪಿ ಯುವಕ ಕಾರನ್ನು ಚಲಾಯಿಸುತ್ತಿದ್ದ ಎನ್ನಲಾಗಿದೆ.

Pavitra Gowda: ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಮೇಕಪ್‌- ಎಸ್‌ಐ ನೇತ್ರಾವತಿಗೆ ನೋಟಿಸ್‌

ಅಪಘಾತದ ಒಂದು ತಿಂಗಳ ನಂತರ, ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠವು, ಅಪಘಾತ ದುರದೃಷ್ಟಕರವಾಗಿದ್ದರೂ, ಅಪ್ರಾಪ್ತ ವಯಸ್ಕನನ್ನು ವೀಕ್ಷಣಾಲಯದಲ್ಲಿ ಇರಿಸಲಾಗುವುದಿಲ್ಲ. ಹಾಗಾಗಿ ಬಿಡುಗಡೆ ಮಾಡುವಂತೆ ಬಾಲ ನ್ಯಾಯ ಮಂಡಳಿಗೆ ನ್ಯಾಯಾಲಯ ಆದೇಶಿಸಿದೆ. ಅಪ್ರಾಪ್ತ ವಯಸ್ಕನ ಪೋಷಕರು ಮತ್ತು ಅಜ್ಜ ಪ್ರಸ್ತುತ ಜೈಲಿನಲ್ಲಿರುವ ಕಾರಣ, ಹದಿಹರೆಯದವರ ಉಸ್ತುವಾರಿಯನ್ನು ಅವನ ಚಿಕ್ಕಮ್ಮನಿಗೆ ನೀಡಲಾಗಿದೆ.

Parliament Speaker: ಬಿಜೆಪಿ ಪಾಲಿಗೇ ಉಳಿದ ಸ್ಪೀಕರ್ ಪಟ್ಟ – ಸಭಾಧ್ಯಕ್ಷರಾಗಿ ಮತ್ತೆ ಓಂ ಬಿರ್ಲಾ ಆಯ್ಕೆ ಫಿಕ್ಸ್ !!

Leave A Reply