Home » Vijayalakshmi Darshan: ಬೆಂಗಳೂರು ತೊರೆದ ದರ್ಶನ್ ಪತ್ನಿ ವಿಜಯಲಕ್ಷ್ಮೀ? ಮಗನನ್ನು ಕರೆದುಕೊಂಡು ಹೋಗಿದ್ದೆಲ್ಲಿಗೆ ?!

Vijayalakshmi Darshan: ಬೆಂಗಳೂರು ತೊರೆದ ದರ್ಶನ್ ಪತ್ನಿ ವಿಜಯಲಕ್ಷ್ಮೀ? ಮಗನನ್ನು ಕರೆದುಕೊಂಡು ಹೋಗಿದ್ದೆಲ್ಲಿಗೆ ?!

0 comments
Vijayalakshmi Darshan

Hindu neighbor gifts plot of land

Hindu neighbour gifts land to Muslim journalist

Vijayalakshmi Darshan: ನಟ ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿಕೊಂಡಿದ್ದಾರೆ. ಕೆಲವು ದಿನಗಳ (ಜೂನ್ 24)ಹಿಂದಷ್ಟೇ ಅವರ ಪತ್ನಿ ವಿಜಯಲಕ್ಷ್ಮಿ, ದರ್ಶನ್(Vijayalakshmi Darshan) ಅವರನ್ನು ಭೇಟಿ ಮಾಡಿ ಬಂದಿದ್ದರು. ಬಳಿಕ ಪೋಸ್ಟ್ ಹಾಕಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಅವರು ಬೆಂಗಳೂರು ತೊರೆದಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಹಾಗಿದ್ರೆ ವಿಜಯಲಕ್ಷ್ಮೀ ಮಗ ವಿನೀಶ್ ನನ್ನು ಕರೆದುಕೊಂಡು ಹೋಗಿದ್ದೆಲ್ಲಿಗೆ? ಎಂಬ ಪ್ರಶ್ನೆ ಎದುರಾಗಿದೆ.

ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Murder Case) ಬಂಧನವಾಗಿರುವ ನಟ ದರ್ಶನ್ ಅವರನ್ನು ಬಿಡುಗಡೆ ಮಾಡಿಸಲೆಂದು ಪತ್ನಿ ವಿಜಯಲಕ್ಷ್ಮೀ ಹರಸಾಹಸಪಡುತ್ತಿದ್ದಾರೆ. ಆದರೆ ಈ ಬೆನ್ನಲ್ಲೇ ವಿಜಯಲಕ್ಷ್ಮೀಯವರು ಮಗನೊಂದಿಗೆ ಕೊಡಗಿನ ಖಾಸಗಿ ರೆಸಾರ್ಟ್’ಗೆ ಶಿಫ್ಟ್ ಆಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಅಂದಹಾಗೆ ದರ್ಶನ್‌ ಬಂಧನವಾದಾಗಿನಿಂದಲೂ, ದರ್ಶನ್ ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇನ್ನೂ ಇವೆಲ್ಲ ಚರ್ಚೆಗಳಿಂದ ನೆಮ್ಮದಿ ಕಳೆದುಕೊಂಡಿರುವ ವಿಜಯಲಕ್ಷ್ಮೀ ಅವರು ಇದೀಗ ತಮ್ಮ ಮಗನ ಜೊತೆ ಕೊಡಗಿನ ಕಡೆ ಪ್ರಯಾಣ ಬೆಳೆಸಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ.

Siddaramaiah-Narendra Modi: ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ -ಡಿಸಿಎಂ, ಇಟ್ಟು ಬೇಡಿಕೆಗಳೇನು?

banner

ಇನ್ನು ಇತ್ತೀಚೆಗೆ ದರ್ಶನ್ ಬೇಟಿ ಬಳಿಕ ಪೋಸ್ಟ್ ಒಂದನ್ನು ಹಾಕಿದ್ದ ವಿಜಯಲಕ್ಷ್ಮೀ ಅವರು ‘ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದರು.

ಅಲ್ಲದೆ ‘ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನ ಅವರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ’ ಎಂದು ಪೋಸ್ಟ್ ಅನ್ನು ಬರೆದುಕೊಂಡದ್ದಾರೆ. ಇದನ್ನು ಇಂಗ್ಲೀಷ್‌ನಲ್ಲಿಯೂ ತರ್ಜುಮೆ ಮಾಡಿ ಮತ್ತೊಂದು ಪೋಸ್ಟ್ ಅನ್ನೂ ಹಂಚಿಕೊಂಡಿದ್ದರು.

Darshan Matter: ದರ್ಶನ್ ವಿಚಾರವಾಗಿ ಸುಮಲತಾ, ರಾಕ್ ಲೈನ್ ಮೌನವೇಕೆ ?! ಅಚ್ಚರಿ ಹೇಳಿಕೆ ಕೊಟ್ಟ ಸಾರಾ ಗೋವಿಂದ್

You may also like

Leave a Comment