Government Rules: ಸರ್ಕಾರಿ ಸಮಾರಂಭಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯವೇ? ರಾಜ್ಯ ಸರ್ಕಾರ ಅಂತಿಮ ತೀರ್ಮಾನವೇನು?

ಇಲ್ಲಿದೆ ಮಾಹಿತಿ

Government Rules: ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Dakshina Kannada: ಚಾಂದಿನಿ ಚಿಕಿತ್ಸೆ ಪ್ರಕರಣ, ವರದಿ ಸಲ್ಲಿಕೆಗೆ ಸೂಚನೆ

ಹೌದು, ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಲಾಗಿದೆ.

ಮುಂಬರುವ ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಹೊಸ ನಿಯಮವನ್ನು ಸರ್ಕಾರ (Government Rules) ಅಧಿಕೃತ ಆದೇಶ ಹೊರಡಿಸಿದೆ.

Fraud: ಎಚ್ಚರ ಜನರೇ ಎಚ್ಚರ…! ನಿಮ್ಮ ದುಡ್ಡು ದೋಚಲು ಹೊಸ ದಾರಿ ಹಿಡಿದ ದುಷ್ಟರು

Leave A Reply

Your email address will not be published.