Dakshina Kannada ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿನ್ನು ಧಾರ್ಮಿಕ ಆಚರಣೆಗೆ ನಿಷೇಧ – ಶಾಸಕ ಹರೀಶ್ ಪೂಂಜಾ ಹೇಳಿದ್ದಿಷ್ಟು!!

Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಶಾಲೆಗಳ ಆವರಣಗಳಲ್ಲಿ ಇನ್ಮುದೆ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ಅಥಲಾ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(DDPI) ಆದೇಶ ಹೊರಡಿಸಿದ್ದಾರೆ.

School Transfer Certificate: ಇನ್ಮುಂದೆ ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್‌ ಆದೇಶ

ಹೌದು, ಈವರೆಗೂ ದ.ಕ(Dakshina Kannad ಜಿಲ್ಲಾ ಶಾಲಾ ಆವರಣಗಳಲ್ಲಿ ಸಾರ್ವಜನಿಕವಾಗಿ ನಡೆಯುತ್ತಿದ್ದ ಕೃಷ್ಣಾಷ್ಟಮಿ(Krishnastami) , ಗಣೇಶೋತ್ಸವ (Ganeshotsava) ಮುಂತಾದ ಹಬ್ಬಗಳ ಆಚರಣೆಗೆ ಇನ್ಮುಂದೆ ನಿಷೇಧ ಹೇರಲಾಗಿದೆ. .ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(ಡಿಡಿಪಿಐ) ಈ ಕುರಿತು ಹೊರಡಿಸಿದ ಜ್ಞಾಪನಾ ಪತ್ರ ಈಗ ವಿವಾದಕ್ಕೆ ಕಾರಣವಾಗಿದೆ.

ಹಬ್ಬಗಳ ಆಚರಣೆ ಕುರಿತು ನಾಗರಿಕ ಸಮಿತಿ ಮುಖಂಡರು ಶಾಲೆಗಳಿಗೆ ಭೇಟಿ ನೀಡಿ ಅನುಮತಿ ಕೇಳಿದಾಗ ಶಿಕ್ಷಣ ಇಲಾಖೆ ಜ್ಞಾಪನಾ ಪತ್ರ ಹೊರಡಿಸಿರುವುದು ಬೆಳಕಿಗೆ ಬಂದಿದೆ. ಜು.16ರಂದು ಡಿಡಿಪಿಐ ಈ ಜ್ಞಾಪನಾ ಪತ್ರ ಹೊರಡಿಸಿದ್ದು, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ.

ಡಿಡಿಪಿಐ ಹೊರಡಿಸಿದ ಜ್ಞಾಪನಾ ಪತ್ರದಲ್ಲಿ ಏನಿದೆ?:
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮೈದಾನ ಅಥವಾ ಆವರಣವನ್ನು ಯಾವುದೇ ಸಂದರ್ಭದಲ್ಲಿ ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನೂ ನೀಡಬಾರದು. ಅಲ್ಲದೆ ಅನುಮತಿಗಾಗಿ ಡಿಡಿಪಿಐ ಕಚೇರಿಗೂ ಪ್ರಸ್ತಾವನೆ ಸಲ್ಲಿಸಬಾರದು ಎಂದು ಖಡಕ್ ಸೂಚನೆ ನೀಡಲಾಗಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇನ್ನು ಈ ರೀತಿ ಸುತ್ತೋಲೆ ಹೊರಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬೆಳ್ತಂಗಡಿ ತಾಲ್ಲೂಕು ಶಾಸಕ ಹರೀಶ್(MLA Harish Poonja) ಪೂಂಜ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಸಾಕ್ಷಿ ಆಗಿದೆ. ಜಿಲ್ಲೆಯಲ್ಲಿ ಈ ಹಿಂದೆ ನಡೆಸುತ್ತಿದ್ದಂತೆ ಮುಂದೆಯೂ ನಡೆಸಲಾಗುವುದು. ಅಧಿಕಾರಿಗಳು ಆದೇಶವನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

Panche: ಪವರ್​​ಫುಲ್​​​ ಆದ ಪಂಚೆಗೆ ‘ಪಂಚೆ’ ಅನ್ನೋ ಹೆಸರು ಬಂದಿದ್ದು ಹೇಗೆ? ಏನಿದರ ಹಿಸ್ಟರಿ?

Leave A Reply

Your email address will not be published.