Guarantee scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Guarantee scheme: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಭರವಸೆ ನೀಡಿದ್ದಾರೆ.( Karnataka guarantee scheme will not stop)

ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನಡೆಸಿ ಡಿಕೆ.ಶಿವಕುಮಾರ್ ಮಾತನಾಡಿದರು. ‘ರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದೆ. ಕಾಂಗ್ರೆಸ್‌’ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲು ಸಾಧ್ಯ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ’ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

‘ದೇಶಕ್ಕೆ ಸ್ವಾತಂತ್ರ್ಯ ಎಂದರೆ ಅದು ಬೆಲೆಕಟ್ಟಿ ಪಡೆಯುವ ವಸ್ತವಲ್ಲ. ಅದು ನಮ್ಮ ಉಸಿರು. ಇದನ್ನು ‌ಮಹತ್ಮಾ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಈ ದೇಶಕ್ಕೆ ಸ್ವಾತಂತ್ರ ತಂದ ಪಕ್ಷ ಕಾಂಗ್ರೆಸ್ ಕಾಂಗ್ರೆಸ್. ಈ ಪಕ್ಷದಲ್ಲಿ ಇದ್ದೇವೆ ಅನ್ನುವುದೇ ಒಂದು ರೀತಿಯಲ್ಲಿ ನಮಗಿರುವ ಹೆಮ್ಮೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಈ ನಡುವೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ 78ನೇ ಸ್ವಾತಂತ್ರ್ಯ ದಿನಾಚರಣೆ ಮಾಡಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ್ದಾರೆ.

‘ಜವಹರಲಾಲ್‌ ನೆಹರು, ವಲ್ಲಭಭಾಯಿ ಪಟೇಲ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ’ ಎಂಬ ಸುಳ್ಳು ಸುದ್ದಿ ಗಮನಿಸಿದ್ದೇವೆ. ಈ ಹೋರಾಟಕ್ಕಾಗಿ 6.50 ಲಕ್ಷ ಜನ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಅದರ ನಡುವೆ ನಮ್ಮ ಹಿರಿಯರು ನಮ್ಮತನವನ್ನು ಉಳಿಸಿದ್ದಾರೆ. ಮೊದಲು ಸ್ವಾತಂತ್ರ ಹೋರಾಟದ ಮೊದಲು ಕಿಚ್ಚು ಹಚ್ವಿದ್ದೇ ಕರ್ನಾಟಕ. ನೂರು ವರ್ಷಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿ ಕರ್ನಾಟಕದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಗಾಂಧೀಜಿ ಅವರು ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು 100 ವರ್ಷ ಆಗಿದೆ. ಇದಕ್ಕಾಗಿ ಸರ್ಕಾರ ಮತ್ತು ಪಕ್ಷ ಎರಡೂ ಸೇರಿ ವಿವಿಧ ಕಾರ್ಯಕ್ರಮ ರೂಪಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಈ ಮಹತ್ವದ ದಿನವನ್ನು ಸ್ಮರಿಸಲು ಕೆಲಸ ಮಾಡುತ್ತಿದ್ದೇವೆ. ಈ ಇಡೀ ವರ್ಷ ಕಾರ್ಯಕ್ರಮಕ್ಕೆ ನಾವು ಕರೆ ಕೊಟ್ಟಿದ್ದೇವೆ. ಅದಕ್ಕಾಗಿ ಒಂದು‌ ಕಮಿಟಿಯನನ್ನ ಕೂಡಾ ರಚಿಸಿದ್ದೇವೆ. ಸಾರ್ವಜನಿಕವಲಯ‌ ಕಟ್ಟಿ ಬೆಳಸಿದ್ದು ಕಾಂಗ್ರೆಸ್ ಪಕ್ಷ. ಅಂದು ಬ್ರಿಟಿಷರ ಪರ ನಿಂತಿದ್ದವರನ್ನು ಇಂದು ತಿರಸ್ಕಾರ ಮಾಡಬೇಕಿದೆ. ಕ್ವಿಟ್ ಇಂಡಿಯಾ ಚಳುವಳಿ ಹತ್ತಿಕ್ಕಲು ಶ್ಯಾಮ್ ಪ್ರಸಾದ್ ಮುಖರ್ಜಿ ಪತ್ರ ಬರೆದಿದ್ದರು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ ಈ ದೇಶಕ್ಕೆ ಕಾಂಗ್ರೆಸ್‌ನ ಕೊಡುಗೆ ಏನು ಎಂದು ಹಲವರು ಕೇಳುತ್ತಾರೆ. ಆದರೆ, ದೇಶಕ್ಕಾಗಿ ಕಾಂಗ್ರೆಸ್ ಕೊಡುಗೆ ನೀಡಿದ ಸಂಸ್ಥೆಗಳನ್ನು ಅವರೇ ಮಾರಾಟ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ದೇಶದ್ರೋಹಿಗಳ ಪರವಾಗಿ ನಿಂತು ದೇಶಪ್ರೇಮ ಪಾಠ ಮಾಡುವವರು ನಮ್ಮ ನಡುವೆ ಇದ್ದಾರೆ’ ಎಂದು ಪರೋಕ್ಷವಾಗಿ ಬಿಜೆಪಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

Leave A Reply

Your email address will not be published.