Weather forecast: ನಾಳೆ ಬೆಳಿಗ್ಗೆವರೆಗೆ ಕರ್ನಾಟಕದ ಹವಾಮಾನ ಹೇಗಿದೆ? ಇಲ್ಲಿದೆ ವಿವರ

Weather forecast: ಕಾಸರಗೋಡು(Karsaragodu) ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ(Coastal district) ಅಲ್ಲಲ್ಲಿ ಗುಡುಗು ಸಹಿತ ಮಳೆಯ(Rain with thunder) ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು ಎಂದಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ ಮತ್ತು ಶಿವಮೊಗ್ಗ ಪೂರ್ವ ಭಾಗಗಳಲ್ಲಿ ಸ್ವಲ್ಪ ಮಳೆ ಜಾಸ್ತಿ ಇರಬಹುದು.

ಪಾವಗಡ, ಬಳ್ಳಾರಿ – ಆಂದ್ರಾ ಗಡಿಭಾಗಗಳಲ್ಲಿ, ರಾಯಚೂರು, ಯಾದಗಿರಿ, ಬೀದರ್ ಭಾಗಗಳಲ್ಲಿಯೂ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಉಳಿದ ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನುಹಳೇ ಹಾಗೂ ಮಧ್ಯ ಕರ್ನಾಟಕ ಭಾಗಕ್ಕೆ ಬಂದರೆ ಮೈಸೂರು, ಮಂಡ್ಯ, ಚಾಮರಾಜನಗರ (ಕೊಳ್ಳೇಗಾಲ ಸುತ್ತಮುತ್ತ), ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸೂಚನೆ ಇದೆ. ಬೆಳಗಾವಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಇಂದು ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಿ ಸೆಪ್ಟೆಂಬರ್ 2ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರಿಂದ ಮುಂಗಾರು ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ಮಳೆ ಕಡಿಮೆಯಾಗಲಿದ್ದು, ಸೆಪ್ಟೆಂಬರ್ 21ರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ತಿರುಗುವಿಕೆಯೂ ಶಿಥಿಲಗೊಂಡರೂ ಮಾತ್ರ ರಾಜ್ಯದ ಕರಾವಳಿಯಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಪರಿಸ್ಥಿತಿ ಕಾದುನೋಡಬೇಕಾಗಿದೆ. ಸೆಪ್ಟೆಂಬರ್ 2ರಂದು ಸ್ಪಷ್ಟತೆ ಸಿಗಬಹುದು.

Leave A Reply

Your email address will not be published.