CM Siddaramaiah: ಮುಂದಿನ ಮುಖ್ಯಮಂತ್ರಿ ಯಾರು ? ತಮ್ಮ ನಿರ್ಧಾರ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ !!

CM Siddaramaiah: ರಾಜ್ಯದಲ್ಲಿ ಮುಡಾ ನಿವೇಶನ ಅಕ್ರಮ ಹೋರಾಟ ಜೋರಾಗುತ್ತಿದ್ದಂತೆ ಇತ್ತ ಕಾಂಗ್ರೆಸ್ ನಲ್ಲೂ ಸಿಎಂ ಕುರ್ಚಿ ವಿಚಾರವಾಗಿ ಚರ್ಚೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕರು, ಸಚಿವರು ನಾನು ಸಿಎಂ ಆಗುತ್ತೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಈ ವಿಚಾರವಾಗಿ ಕೊನೆಗೂ ಮೌನ ಮುರಿದ ಸಿದ್ದರಾಮಯ್ಯ(CM Siddaramaiah)ಅವರು ಸಿಎಂ ಆಗಿ ಯಾರು ಮುಂದುವರಿಯುತ್ತಾರೆ ಎಂಬುದರ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಹೌದು, ಅರಣ್ಯ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತಂತೆ ಯಾರೂ ಹೇಳಿಕೆ ನೀಡುತ್ತಿಲ್ಲ. ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. ಎಲ್ಲರೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳುತ್ತಿದ್ದಾರೆ. ಸಿಎಂ ಸ್ಥಾನ ಖಾಲಿಯಾದಾಗ ಮಾತ್ರ ಅದರ ಬಗ್ಗೆ ಚರ್ಚಿಸಲಾಗುವುದು. ಮುಂದೆ ನಾನೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತನ್ಮೂಲಕ ಮುಂದಿನ ಸಿಎಂ ಕುರಿತ ಚರ್ಚೆಗೆ ತೆರೆ ಎಳೆಯಲು ಯತ್ನಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾರೂ ಹೇಳಿಲ್ಲ. ಸಿಎಂ ಸ್ಥಾನ ಖಾಲಿ ಇಲ್ಲ. ಹೀಗಿರುವಾಗ ಯಾರಾದರೂ ಸಿಎಂ ಆಗುತ್ತೇನೆ ಎಂದು ಏಕೆ ಹೇಳುತ್ತಾರೆ? ಎಲ್ಲರೂ ಹೇಳುತ್ತಿರುವುದು ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Leave A Reply

Your email address will not be published.