Dakshina Kannada: ಈದ್ ಮಿಲಾದ್ ಬೈಕ್‌ ರ‍್ಯಾಲಿಗೆ ಅನುಮತಿ ಬೆನ್ನಲ್ಲೇ ಹಸಿರು ಬಾವುಟ ಪ್ರದರ್ಶನ: ಬಿ.ಸಿ ರೋಡ್‌ನಲ್ಲಿ ಗಲಬೆಯ ಮುನ್ಸೂಚನೆ

Dakshina Kannada: ಈದ್ ಮಿಲಾದ್ (Eid Milad) ಹಿನ್ನೆಲೆ ಬಂಟ್ವಾಳ ( Dakshina Kannada Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ (B C Road) ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ್ದು, ಇದು ಗಲಬೆ ಆಗುವ ಮುನ್ಸೂಚನೆ ನೀಡಿದೆ.

ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ‍್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಮುಸ್ಲಿಂ ರ ಬೈಕ್ ರ‍್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್‌ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

Leave A Reply

Your email address will not be published.