Rahul Gandhi: ತಿರುಪತಿ ಲಡ್ಡು ವಿವಾದ- ರಾಹುಲ್ ಗಾಂಧಿ ಹೇಳಿದ್ದಿಷ್ಟು !!

Rahul Gandhi: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ವಿವಾದದ ಪ್ರಕರಣ ದೇಶಾದ್ಯಂತ ಕಿಚ್ಚು ಹಬ್ಬಿಸಿದೆ. ಕೋಟ್ಯಾಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಇದೀಗ ಈ ಪ್ರಕರಣದ ಕುರಿತು ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ(Rahul Gandhi) ಪ್ರತಿಕ್ರಿಯಿಸಿದ್ದು ಇದು ಗೊಂದಲಕಾರಿಯಾಗಿದೆ ಎಂದು ಹೇಳಿದ್ದಾರೆ.

ಹೌದು, ಈ ಲಾಡು ವಿವಾದದ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ ಅವರು “ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಸಾದವನ್ನು ಅಪವಿತ್ರಗೊಳಿಸಲಾಗಿದೆ ಎಂಬ ವರದಿಗಳು ಆತಂಕಕಾರಿಯಾಗಿವೆ. ಭಗವಾನ್ ಬಾಲಾಜಿ ಭಾರತ ಮತ್ತು ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರಿಗೆ ಪೂಜ್ಯ ದೇವರು. ಈ ವಿಷಯವು ಪ್ರತಿಯೊಬ್ಬ ಭಕ್ತರಿಗೂ ನೋವುಂಟು ಮಾಡುತ್ತದೆ ಮತ್ತು ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕಾಗಿದೆ. ಭಾರತದಾದ್ಯಂತದ ಇರುವ ನಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯ ರಕ್ಷಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ಕೂಡ ಈ ಕುರಿತು ಪ್ರತಿಕ್ರಿಯಿಸಿದ್ದು ‘ತಿರುಪತಿ ಲಡ್ಡು ಪ್ರಸಾದವನ್ನು ಅಪವಿತ್ರಗೊಳಿಸಲಾಗಿದೆ ಎಂಬ ಹೇಳಿಕೆಗಳು ಸರಿಯಾಗಿದ್ದರೆ, ಪೂರ್ಣ ಪ್ರಮಾಣದ ತನಿಖೆಯು ತಪ್ಪಿತಸ್ಥರನ್ನು ಗುರುತಿಸಬೇಕು, ಆದರೆ ಅವರು ತಪ್ಪಾಗಿದ್ದರೆ ಅಥವಾ ಪ್ರೇರಿತರಾಗಿದ್ದರೆ, ಲಕ್ಷಾಂತರ ತಿರುಪತಿ ಭಕ್ತರು ತಮ್ಮ ನಂಬಿಕೆಯೊಂದಿಗೆ ಆಟವಾಡುವವರನ್ನು ಕ್ಷಮಿಸುವುದಿಲ್ಲ’ ಎಂದು ಹೇಳಿದೆ.

 

Leave A Reply

Your email address will not be published.