By Election: ಚನ್ನಪಟ್ಟಣ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಬಹುತೇಕ ಫೈನಲ್ – ಯೋಗೇಶ್ವರ್ ಗೆ ಶಾಕ್!!

By Election: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ(BY Election)ಪೈಕಿ ಚನ್ನಪಟ್ಟಣ ಕ್ಷೇತ್ರ ಮೈತ್ರಿ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕ್ಷೇತ್ರವನ್ನು ಬಿಜೆಪಿಗೆ ಬಿಡಬೇಕೋ ಅಥವಾ ತಮ್ಮಲ್ಲೇ ಇಟ್ಟುಕೊಳ್ಳಬೇಕೋ ಎಂದು ಜೆಡಿಎಸ್ ಭಾರೀ ಗೊಂದಲದಲ್ಲಿದೆ. ಆದರೆ ಈ ಬೆನ್ನಲ್ಲೇ ಈ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಹೆಸರು ಬಹುತೇಕ ಫೈನಲ್ ಆಗಿದ್ದು, ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ ಪಿ ಯೋಗೇಶ್ವರ್ ಗೆ ಬಿಗ್ ಶಾಕ್ ಎದರಾಗಿದೆ ಎನ್ನಲಾಗಿದೆ.

ಹೌದು, ಜೆಡಿಎಸ್​ ಮತ್ತು ಬಿಜೆಪಿ(JDS-BJP) ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿಪಿ ಯೋಗೀಶ್ವರ್ ತುದಿಗಾಲಿನಲ್ಲಿ ನಿಂತಿದ್ರೆ, ಅತ್ತ ನಿಖಿಲ್ ಕುಮಾರಸ್ವಾಮಿ ಅವರು ನಿಲ್ಲುತ್ತಾರೆ ಎಂಬ ಮಾತು ಇತ್ತು. ಇದೀಗ ಅದು ನಿಜವೆನಿಸಿದೆ. ಹೌದು..ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರು ಕರೆದಿದ್ದ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ. ನಿಖಿಲ್​ ಕುಮಾರಸ್ವಾಮಿಯನ್ನೇ ಕಣಕ್ಕಿಳಿಸುವ ಬಗ್ಗೆ ನಿರ್ಧಾರವಾಗಿದೆ ಎನ್ನಲಾಗಿದೆ.

ಬಿಡದಿಯ ತೋಟದ ಮನೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ(H D kumarswamy) ನೇತೃತ್ವದಲ್ಲಿ ಜೆಡಿಎಸ್ ನ ಪ್ರಮುಖ ನಾಯಕರ ಸಭೆ ಕರೆಯಲಾಗಿತ್ತು. ಇದರಲ್ಲಿ ಚನ್ನಪಟ್ಟಣದ ಅಭ್ಯರ್ಥಿಯ ಬಗ್ಗೆ ಸಾಕಷ್ಟು ವಿಚಾರಗಳು ಚರ್ಚೆಗಳಾದವು. ಬಳಿಕ ಜೆಡಿಎಸ್ ನಾಯಕರೆಲ್ಲ ಒಟ್ಟಿಗೆ ಸೇರಿ ನಿಖಿಲ್ ಕುಮಾರಸ್ವಾಮಿ(Nikhil Kumarswamy) ಅವರನ್ನೇ ನಿಲ್ಲಿಸಬೇಕೆಂಬ ಒಂದು ನಿರ್ಧಾರಕ್ಕೆ ಬಂದಿದ್ದಾರೆ.

ಇತ್ತ ಹೀಗಾಗಿ ಟಿಕೆಟ್​​ಗೆ ಪಟ್ಟು ಹಿಡಿದಿರುವ ಮಿತ್ರ ಪಕ್ಷದ ನಾಯಕ ಸಿಪಿ ಯೋಗೇಶ್ವರ್ ಅವರನ್ನು ಮನವೊಲಿಸಲು ಜೆಡಿಎಸ್​ ನಾಯಕರು ಹರಸಾಹಸಪಡುತ್ತಿದ್ದಾರೆ. ಒಂದು ವೇಳೆ ಇದು ಫೈನಲ್ ಆದರೆ ಸಿ ಪಿ ಯೋಗೇಶ್ವರ್ ಮುಂದಿನ ನಠೆ ಏನು ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

Leave A Reply

Your email address will not be published.