Chaitra Kundapura: ಕಿಚ್ಚ ಸುದೀಪ್ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ !! ಬಿಗ್ ಬಾಸ್ ಒಳಗೇ ಇದ್ದುಕೊಂಡು ಚೈತ್ರಾ ಹೇಳಿದ್ದೇನು?

Chaitra Kundapura: ಬಿಗ್ ಬಾಸ್ ಕನ್ನಡ 11ನೇ ಸೀಸನ್‌ನ ಆರಂಭದಲ್ಲೇ ಬಿಗ್‌ ಬಾಸ್‌ ಮನೆಯಲ್ಲಿ ಲಾಯರ್‌ ಜಗದೀಶ್‌ ಸಖತ್ ಸದ್ದು ಮಾಡಿದ್ದರು. ಆದರೆ, ಅವಾಚ್ಯ ಶಬ್ಧಗಳನ್ನು ಬಳಸಿದ್ದರಿಂದ ಅವರನ್ನು ಹೊರಹಾಕಲಾಯಿತು. ಇನ್ನು ಜಗದೀಶ್‌ ಅವರನ್ನು ತಳ್ಳಿದ ಹಿನ್ನೆಲೆ ರಂಜಿತ್‌ ಹೊರಬಿದ್ದರು. ಇದರ ಬೆನ್ನಲ್ಲೇ ಚೈತ್ರಾಗೆ ಸುದೀಪ್‌ ಕ್ಲಾಸ್ ತೆಗೆದುಕೊಂಡಿದ್ದರು. ಆದರೆ ಈ ವಿಚಾರವಾಗಿ ಚೈತ್ರಾ ಕುಂದಾಪುರ(Chaitra Kundapura), ಕಿಚ್ಚ ಸುದೀಪ್(Kiccha Sudeep) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹೌದು, ಅವಾಚ್ಯ ಶಬ್ಧಗಳನ್ನು ಬಳಸಿದ್ದಾರೆ ಎನ್ನುವ ಕಾರಣಕ್ಕೆ ಲಾಯರ್‌ ಜಗದೀಶ್‌ ಅವರನ್ನು ಬಿಗ್‌ ಬಾಸ್‌ ಮನೆಯಿಂದ ಹೊರಹಾಕಲಾಯಿತು. ಬಳಿಕ ಜಗದೀಶ್‌ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೂಗುಗಳು ಎದ್ದವು. ಜಗದೀಶ್‌ ಅವರನ್ನು ಕೆಟ್ಟ ಪದಗಳನ್ನು ಬಳಸಿದ್ದಾರೆ ಎಂದು ಹೊರಗಡೆ ಹಾಕಿದ್ದೀರ. ಹಾಗಾದರೆ, ಚೈತ್ರಾ ಕುಂದಾಪುರ ಹಾಗೂ ಮಾನಸ ಅವರು ಕೂಡ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅವರಿಬ್ಬರನ್ನು ಯಾಕೆ ಹೊರಗಡೆ ಹಾಕಿಲ್ಲ ಎಂದು ನೆಟ್ಟಿಗರು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದರು. ಇದನ್ನು ಪ್ರಶ್ನಿಸಿ ಕಿಚ್ಚ ಕೂಡ ಪಂಚಾಯ್ತಿಯಲ್ಲಿ ಧ್ವನಿ ಎತ್ತಿದ್ದರು. ಅವರು ವೀಕೆಂಡ್​ನಲ್ಲಿ ಜಗದೀಶ್ ಅವರ ಪರವಾಗಿ ಮಾತನಾಡಿದ್ದರು. ಜಗದೀಶ್ ಹೇಳಿದ್ದು ಸರಿ ಅಲ್ಲ ಎಂದು ಹೇಳಿದ ಸುದೀಪ್​, ಎಲ್ಲರೂ ಅವರನ್ನು ತಡೆಯಬಹುದಿತ್ತು ಎನ್ನುವ ಅಭಿಪ್ರಾಯ ಹೊರಹಾಕಿದ್ದರು. ಈ ಬಗ್ಗೆ ಎಲ್ಲರಿಗೂ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನು ಮನೆ ಮಂದಿ ಖಂಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಚೈತ್ರಾ ‘ನೀನು ನನಗೆ ಕೆಸರು ಎರಚಿದರೆ ನಾನು ಕೂಡ ಕೆಸರನ್ನೇ ಎರಚೋದು. ಆ ವ್ಯಕ್ತಿಗೆ ನಾನು ಗುಲಾಬಿ ಎಸೆಯೋಕಾಗಲ್ಲ. ಆ ವ್ಯಕ್ತಿ ಬಗ್ಗೆ ನನಗೇಕೆ ಅಷ್ಟು ಕ್ಲ್ಯಾರಿಟಿ ಕೊಡ್ತಾರೆ? ಸುದೀಪ್ ಸ್ಪರ್ಧಿಗಳಿಗೆ ಬೈದರು ಅನ್ನೋದನ್ನು ಮಾತ್ರ ಜನರು ನೆನಪಿಟ್ಟುಕೊಳ್ಳುತ್ತಾರೆ. ಮಧ್ಯ ಮಧ್ಯದಲ್ಲಿ ಸೇರಿಸಿದ ಲೈನ್​ನ ಜನರು ನೆನಪಿಟ್ಟುಕೊಳ್ಳಲ್ಲ’ ಎಂದಿದ್ದಾರೆ.

ಅಲ್ಲದೆ ‘ಕೈ ಮುಗಿದು ಪೂಜೆ ಮಾಡುವ ಕಲ್ಲಿಗೂ, ಎಲ್ಲೋ ಬಿದ್ದ ಕಲ್ಲಿಗೂ ವ್ಯತ್ಯಾಸ ಇರುತ್ತದೆ. ರೋಡ್​ನಲ್ಲಿರೋ ಕಲ್ಲಿಗೆ ಉಗಿದೆ ಎಂದ ಮಾತ್ರಕ್ಕೆ ನಾನು ತಪ್ಪಿತಸ್ಥೆ ಆಗಲ್ಲ. ನನ್ನ ಮಾತನ್ನು ಕಂಪ್ಲೀಟ್ ಮಾಡೋಕೆ ಬಿಡಬೇಕು. ಇಡೀ ಮನೆಯನ್ನು ವಿಲನ್ ಮಾಡಿದ್ದಾರೆ. ಅವರು ವಿಚಾರದಲ್ಲಿ ನೀವು ಮಾಡಿದ್ದು ತಪ್ಪು ಅಂದಿದ್ದಾರೆ. ಅದು ಸರಿ ಅಲ್ಲ’ ಎಂದಿದ್ದಾರೆ ಚೈತ್ರಾ.

Leave A Reply

Your email address will not be published.