Channapattana By Election: BJP-JDS ಮೈತ್ರಿ ಅಭ್ಯರ್ಥಿಯಾಗಿ ಅಚ್ಚರಿಯ ಮಹಿಳೆಯರು ಕಣಕ್ಕೆ ?! ಯಾರು ಆ ಪವರ್ ಲೇಡಿಗಳು ?

Channapattana By Election: ರಾಜ್ಯದಲ್ಲಿ ಉಪಚುನಾವಣೆಯ (Assembly By Election) ಕಾವು ಜೋರಾಗಿದೆ. ಅದರಲ್ಲೂ ಚನ್ನಪಟ್ಟಣ(Channapattana) ಕ್ಷೇತ್ರದ ಚರ್ಚೆಯೇ ಜೋರು. ಇದನ್ನು ಜಿದ್ದಾಗಿ ಪರಿಗಣಿಸಿರುವ ಕಾಂಗ್ರೆಸ್ ಹಾಗೂ ಮೈತ್ರಿ ದೋಸ್ತಿಗಳು ಗೆಲ್ಲಲೇ ಬೇಕೆಂದು ಪಣತೊಟ್ಟಿವೆ. ಅದರಲ್ಲೂ ಮೈತ್ರಿ ಪಕ್ಷಗಳಿಗೆ ತಲೆನೋವಾಗಿದ್ದ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಸೇರುವ ಮೂಲಕ ಕಾಂಗ್ರೆಸ್ ನಿಂದ ಕಣಕ್ಕಿಳಿಯೋದು ಫಿಕ್ಸ್ ಆಗಿದೆ. ಹೀಗಾಗಿ ಈ ಬೆನ್ನಲ್ಲೇ BJp-JDS ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿವೆ. ಈ ನಡುವೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಈ ಇಬ್ಬರು ಮಹಿಳೆಯನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ ಎನ್ನುವ ಸುದ್ದಿ ಹೊರಬಿದ್ದಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ(HbD Kumarswamy) ಅವರು ಸ್ಪರ್ಧಿಸಿದ ಕ್ಷೇತ್ರವಾದ ಚನ್ನಪಟ್ಟಣವು ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಪ್ರಮುಖವಾದುದು. ಇದೀಗ ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೂ ಈ ಕ್ಷೇತ್ರದಲ್ಲಿ ನಮ್ಮವರೇ ಗೆಲ್ಲಬೇಕೆಂಬುದು ಅವರ ಅಭಿಲಾಷೆ. ಅದು ಬಿಜೆಪಿ ಆಗಲಿ ಅಥವಾ ಜೆಡಿಎಸ್ ಆಗಲಿ, ಒಟ್ಟು ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ಇಂಗಿತ. ಅಲ್ಲದೆ ಕಾಂಗ್ರೆಸ್ ಕೂಡ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಇದೆಲ್ಲದರ ನಡುವೆ ಪ್ಲಾನ್ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು, ಹೇಗಾದರೂ ಮಡಿ ಯೋಗೇಶ್ವರ್ ಅನ್ನು ಸೋಲಿಸಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಪಣತೊಟ್ಟಿವೆ. ಹೀಗಾಗಿ ಯೋಗೇಶ್ವರ್‌ ಎದುರು ಜೆಡಿಎಸ್‌ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅನುಸೂಯ ಮಂಜುನಾಥ್:
ಮೊದಲನೆಯದಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿ ಅಥವಾ ಕುಮಾರಸ್ವಾಮಿ ಅವರ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ! ಹೌದು, ಡಾ ಸಿ ಎನ್ ಮಂಜುನಾಥ್ ಪತ್ನಿ, ದೇವೇಗೌಡರ ಸುಪುತ್ರಿ ಅನುಸೂಯಾ(Anusuya Mamjunath) ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

ಅನಿತಾ ಕುಮಾರಸ್ವಾಮಿ:
ಈ ಹಿಂದೆ ಶಾಸಕರಾಗಿದ್ದ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಹೆಸರು ಸಹ ಮುನ್ನೆಲೆಗೆ ಬಂದಿದೆ. ಅನಸೂಯ ಅಥವಾ ಅನಿತಾ ಕುಮಾರಸ್ವಾಮಿ ಅವರಿಗೆ ಎನ್‌ಡಿಎ ಟಿಕೆಟ್‌ ಘೋಷಿಸುವುದು ಬಹುತೇಕ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ಜೆಡಿಎಸ್‌ ಮತ್ತೊಮ್ಮೆ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದೆಯಂತೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಬಗ್ಗೆಯೂ ಎನ್‌ಡಿಎ ಹೈಕಮಾಂಡ್‌ಗೆ ಮಾಹಿತಿ ನೀಡಿರುವ ಕುಮಾರಸ್ವಾಮಿ, ಇಂದು ಸಂಜೆ ಒಂದು ಸುತ್ತಿನ ಸಭೆ ಕೂಡ ಕರೆದಿದ್ದಾರೆ.

Leave A Reply

Your email address will not be published.