Building collapse: ಬೆಂಗಳೂರು ಕಟ್ಟಡ ದುರಂತ: ಮೃತಪಟ್ಟವರ ಕುಟುಂಬ ಹಾಗೂ ಗಾಯಾಳುಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

Building collapse: ಬೆಂಗಳೂರಿನಲ್ಲಿ(Bengaluru) ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ್ಟ ಕಾರ್ಮಿಕರ(Workers) ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ(PM Modi) ಅವರು 2 ಲಕ್ಷ ರೂ.ಪರಿಹಾರ(Compensation) ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(MP Prahalad Joshi) ತಿಳಿಸಿದ್ದಾರೆ. ಈ ದುರಂತದಲ್ಲಿ ಗಾಯಗೊಂಡ ಗಾಯಗೊಂಡ ಕಾರ್ಮಿಕರಿಗೆ ಪ್ರಧಾನಿ ಅವರು ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ ಎಂದು ಹೇಳಿದ್ದಾರೆ.

ಕಟ್ಟಡ ದುರಂತಕ್ಕೆ ತೀವ್ರ ವಿಷದ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಅವಘಡದಲ್ಲಿ ಸಾವು-ನೋವು ಕಂಡ ಕುಟುಂಬಗಳ ನೆರವಿಗೆ ಸ್ಪಂದಿಸಿದ್ದಾರೆ ಎಂದು ಜೋಶಿ ಹೇಳಿದ್ದಾರೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ್ಟ 8 ಕಾರ್ಮಿಕರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ 6 ಮಂದಿ ಗಾಯಾಳುಗಳಿಗೆ ತಲಾ 50,000 ರೂ. ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.

ಈ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದುಃಖ ಸಹಿಸಿಕೊಳ್ಳುವ ಚೈತನ್ಯವನ್ನು ದೇವರು ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಅವರು ಪ್ರಾರ್ಥಿಸಿದ್ದಾರೆ.

Leave A Reply

Your email address will not be published.