Congress: ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆಯಲ್ಲಿ ಕಾಂಗ್ರೆಸ್‌; ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

Congress: ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಯಾಸಿರ್‌ ಅಹ್ಮದ್‌ಖಾನ್‌ ಪಠಾಣ್‌ ಅವರನ್ನು ಆಯ್ಕೆ ಮಾಡಲಾಗಿದೆ. ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್‌ ಸೆಕ್ರೆಟರಿ ಕೆಸಿ ವೇಣುಗೋಪಾಲ್‌ ಅವರು ಇಂದು ಆದೇಶ ಹೊರಡಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿಯ ಬಸವರಾಜ್‌ ಬೊಮ್ಮಾಯಿ ವಿರುದ್ಧ ಹಾನಗಲ್‌ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ್‌ ಅವರು ಸ್ಪರ್ಧೆ ಮಾಡಿ ಸೋಲುಂಡಿದ್ದರು. ಇದೀಗ ಮತ್ತೊಮ್ಮೆ ಉಪಚುನಾವಣೆಗೂ ಇವರನ್ನೇ ಕಣಕ್ಕಿಳಿಸಿದೆ ಕಾಂಗ್ರೆಸ್‌ ಹೈಕಮಾಂಡ್‌.

Leave A Reply

Your email address will not be published.