Kadaba: ಶಸ್ತ್ರಚಿಕಿತ್ಸೆ ಮಾಡುವಾಗಲೇ ಹೃದಯಾಘಾತ; ವ್ಯಕ್ತಿ ಸಾವು

Kadaba: ಅನಾರೋಗ್ಯದ ಹಿನ್ನೆಲಯಲ್ಲಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.2 (ಮಂಗಳವಾರ) ಶನಿವಾರ ನಡೆದಿರುವ ಕುರಿತು ವರದಿಯಾಗಿದೆ.
ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬುವವರ ಪುತ್ರ ಜೈಸನ್ ಜಾರ್ಜ್(29) ಮೃತಪಟ್ಟವರು.
ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಶನಿವಾರ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ, ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.