Udupi: ಬಾಲಕೃಷ್ಣ ಪೂಜಾರಿ ಹತ್ಯೆ ಪ್ರಕರಣ; ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

Share the Article

Udupi: ಇಡೀ ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳುಸುವಂತೆ ಮಾಡಿದ್ದ ಅಜೆಕಾರು ಬಾಲಕೃಷ್ಣ ಪೂಜಾರಿ ಅವರ ಕೊಲೆ ಪ್ರಕರಣಕ್ಕೆ ಕುರಿತಂತೆ ಇದೀಗ ಮರಣೋತ್ತರ ಪರೀಕ್ಷೆ ವರದಿ ಪೊಲೀಸರಿಗೆ ದೊರಕಿದೆ.

ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಕುರಿತು ಉಲ್ಲೇಖ ಮಾಡಲಾಗಿದೆ.

ಉಸಿರುಗಟ್ಟಿಸಿ ಸಾವು ನಡೆದಿರುವುದು, ಮುಖದಲ್ಲಿ ಗಾಯದ ಗುರುತು ಮೂಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ವರದಿಯಾಗಿದೆ.

ಇದೀಗ ಪೊಲೀಸರ ತನಿಖೆ ಚುರುಕುಗೊಂಡಿದ್ದು, ಮೊಬೈಲ್‌ ಸಂಭಾಷಣೆ, ಕರೆ ಮಾಡಿದ ವಿವರ, ನೆಟ್‌ವರ್ಕ್‌ ಮಾಹಿತಿ, ಸಿಸಿಟಿವಿ ಬಗ್ಗೆ ಪೊಲೀಸರಿಂದ ವೇಗದ ತನಿಖೆ ನಡೆಯುತ್ತಿರುವ ಕುರಿತು ವರದಿಯಾಗಿದೆ.

Leave A Reply