Channapattana By Election : ನಿಖಿಲ್ ಕುಮಾರಸ್ವಾಮಿ ಗೆ ದೊಡ್ಡ ಅಘಾತ, ಗೆಲುವಿನತ್ತ ಮುನ್ನಡೆದ ಸಿಪಿ ಯೋಗೇಶ್ವರ್!!

Share the Article

Channapattana By Election : ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ‌ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಈ ನಡುವೆ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಸೋಲು – ಗೆಲುವಿನ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ ಈಗ ನಿಖಿಲ್ ಕುಮಾರಸ್ವಾಮಿಯವರಿಗೆ ದೊಡ್ಡ ಆಘಾತ ಎದುರಾಗಿದೆ. ಯಾಕೆಂದರೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ.

ರಾಜ್ಯದಲ್ಲಿಕುತೂಹಲ ಕೆರಳಿಸಿರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹೈ ವೋಲ್ಟೇಜ್‌ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಇವರು ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ 12ನೇ ಸುತ್ತಿನ ಅಂತ್ಯದ ವೇಳೆಗೆ 22,000 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.

Leave A Reply